ಮಂಗಳೂರು: ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ವರದಿ ಬಂದಿದೆ. ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಮಹಿಳೆಯ ಅತ್ತೆಗೂ ಈಗ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಇದೀಗ ಕೊರೊನಾ ಪೀಡಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.
78 ವರ್ಷದ ಈ ಮಹಿಳೆ ಪಾರ್ಶ್ವವಾಯುಗೆ ಖಾಯಿಲೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ ಹಾಗೂ ಇವರ ಸೊಸೆ ಕೊರೊನಾದಿಂದ ಸಾವನ್ನಪ್ಪಿದ ಬಳಿಕ ಬುಧವಾರ ಇವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಇವರಲ್ಲೂ ಸೋಂಕು ದೃಢಪಟ್ಟಿದೆ.
ಮೃತ ಮಹಿಳೆಯ ಮಕ್ಕಳ ಹಾಗೂ ಪತಿಯ ವರದಿ ನೆಗೆಟಿವ್ ಬಂದಿದೆ.
ರಾಜ್ಯದಲ್ಲಿ ಗುರುವಾರದಂದು ಮಧ್ಯಾಹ್ನದವರೆಗೆ ಒಟ್ಟು 12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 9 ಬೆಂಗಳೂರು ನಗರ , 2 ಹುಬ್ಬಳ್ಳಿ , 2 ವಿಜಯಪುರ ಹಾಗೂ 2 ಮಂಡ್ಯ ಹಾಗೂ ಬಂಟ್ವಾಳದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…