ಬಂಟ್ವಾಳ:ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಮಹಿಳೆಯೊಬ್ಬರು ಕೋವಿಡ್ -19 ಕೋರೋನ ಸೊಂಕು ಖಾಯಿಲೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಮೃತಪಟ್ಟ ಮಹಿಳೆಗೆ ಬಂಟ್ವಾಳದಲ್ಲಿ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಸು ದಾಖಲಾಗಿದೆ.
ಮೃತರ ಗಂಡ ಮತ್ತು ಮಗ ನೀಡಿದ ಮಾಹಿತಿಯಂತೆ, ಮೃತ ಮಹಿಳೆ ನ್ಯುಮೋನಿಯ (ಶ್ವಾಸಕೋಶದ) ಖಾಯಿಲೆಯಿಂದ ಬಳಲುತ್ತಿದ್ದು. ಅವರಿಗೆ ಅನೇಕ ಕಡೆ ಚಿಕಿತ್ಸೆ ಕೊಡಿಸಿದರು ಖಾಯಿಲೆಯಿಂದ ಗುಣ ಮುಖವಾಗದೆ ಇತ್ತು. ಈಚೆಗೆ ಬಳಲುತ್ತಿದ್ದ ಅವರನ್ನು ಎ.15 ರಂದು ಚಿಕಿತ್ಸೆಗಾಗಿ ಬಂಟ್ವಾಳದ ಖಾಸಗಿ ಕ್ಲಿನಿಕ್ ಗೆ ಕರೆದೊಯ್ಯಲಾಗಿತ್ತು. ಆದರೆ ಆ ವೈದ್ಯರು ಕೆ.ಪಿ.ಎಂ.ಇ ಕಾಯ್ದೆ ಪ್ರಕಾರ ಎಲ್ಲಾ ಸಾಂಕ್ರಾಮಿಕ ಖಾಯಿಲೆಗಳನ್ನು ಸಂಬಂಧಪಟ್ಟ ಆರೋಗ್ಯ ಇಲಾಖೆಗೆ ನೀಡಬೇಕಾಗಿದ್ದು. ನಾಲ್ಕು ದಿನಗಳ ಚಿಕಿತ್ಸೆಯನ್ನು ನೀಡಿ ರೋಗ ಉಲ್ಬಣಗೊಂಡರು ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆ ಆಸ್ಪತ್ರೆಗೆ ನಿರ್ದೆಶನವನ್ನು ವೈದ್ಯರು ನೀಡಿರುವುದಿಲ್ಲ, ಆರೋಗ್ಯ ಇಲಾಖೆಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ ಈ ಕಾರಣದಿಂದ ತಾಲೂಕು ಆರೋಗ್ಯಾಧಿಕಾರಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…