ಬಂಟ್ವಾಳ:ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಮಹಿಳೆಯೊಬ್ಬರು ಕೋವಿಡ್ -19 ಕೋರೋನ ಸೊಂಕು ಖಾಯಿಲೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಮೃತಪಟ್ಟ ಮಹಿಳೆಗೆ ಬಂಟ್ವಾಳದಲ್ಲಿ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಸು ದಾಖಲಾಗಿದೆ.
ಮೃತರ ಗಂಡ ಮತ್ತು ಮಗ ನೀಡಿದ ಮಾಹಿತಿಯಂತೆ, ಮೃತ ಮಹಿಳೆ ನ್ಯುಮೋನಿಯ (ಶ್ವಾಸಕೋಶದ) ಖಾಯಿಲೆಯಿಂದ ಬಳಲುತ್ತಿದ್ದು. ಅವರಿಗೆ ಅನೇಕ ಕಡೆ ಚಿಕಿತ್ಸೆ ಕೊಡಿಸಿದರು ಖಾಯಿಲೆಯಿಂದ ಗುಣ ಮುಖವಾಗದೆ ಇತ್ತು. ಈಚೆಗೆ ಬಳಲುತ್ತಿದ್ದ ಅವರನ್ನು ಎ.15 ರಂದು ಚಿಕಿತ್ಸೆಗಾಗಿ ಬಂಟ್ವಾಳದ ಖಾಸಗಿ ಕ್ಲಿನಿಕ್ ಗೆ ಕರೆದೊಯ್ಯಲಾಗಿತ್ತು. ಆದರೆ ಆ ವೈದ್ಯರು ಕೆ.ಪಿ.ಎಂ.ಇ ಕಾಯ್ದೆ ಪ್ರಕಾರ ಎಲ್ಲಾ ಸಾಂಕ್ರಾಮಿಕ ಖಾಯಿಲೆಗಳನ್ನು ಸಂಬಂಧಪಟ್ಟ ಆರೋಗ್ಯ ಇಲಾಖೆಗೆ ನೀಡಬೇಕಾಗಿದ್ದು. ನಾಲ್ಕು ದಿನಗಳ ಚಿಕಿತ್ಸೆಯನ್ನು ನೀಡಿ ರೋಗ ಉಲ್ಬಣಗೊಂಡರು ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆ ಆಸ್ಪತ್ರೆಗೆ ನಿರ್ದೆಶನವನ್ನು ವೈದ್ಯರು ನೀಡಿರುವುದಿಲ್ಲ, ಆರೋಗ್ಯ ಇಲಾಖೆಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ ಈ ಕಾರಣದಿಂದ ತಾಲೂಕು ಆರೋಗ್ಯಾಧಿಕಾರಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…