ಬಂಟ್ವಾಳ| ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ| ಜೀವ ಬೆದರಿಕೆ | ಪ್ರಕರಣ ದಾಖಲು |

April 20, 2020
9:13 PM

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿರವರೊಂದಿಗೆ ಕರ್ತವ್ಯದ ನಿಮಿತ್ತ ಬಂಟ್ವಾಳ ಪುರಸಭೆಯ ಅಭಿಯಂತರರು ಹಾಗೂ ಚಾಲಕನಿಗೆ  ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಉದ್ದೇಶ ಪೂರ್ವಕವಾಗಿ ಕರ್ತವ್ಯಕ್ಕೆಅಡ್ಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರು  ವಾಹನ ಚಾಲಕ ವೀರಪ್ಪ ಅವರೊಂದಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಯವರು ಕರ್ತವ್ಯದ ನಿಮಿತ್ತ  ತೆರಳಿದ್ದರು. ಈ ಸಂದರ್ಭ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಅಂಗಡಿಯೊಂದು ತೆರೆದಿತ್ತು  ಹಾಗೂ ಅಂಗಡಿಯ ಎದುರು  ಜನರು ಗುಂಪಾಗಿ ಸೇರಿರುವುದು ಕಂಡುಬಂದಿದ್ದು, ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಲಾಕ್ಡೌನ್ ಇದೆ ಎಂದು ಅಂಗಡಿ ಮುಚ್ಚುವಂತೆ ಸೂಚನೆ ನೀಡಿದರು.

ಅಂಗಡಿಯನ್ನು ಮುಚ್ಚದೆ ಕೊರೊನಾ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದಿದ್ದರೂ ಅಂಗಡಿಯನ್ನು ತೆರೆದು ಉದ್ದೇಶ ಪೂರ್ವಕವಾಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ ಪಡಿಸಿದರು ಎಂದು ದೂರಲಾಗಿದೆ. ಈ ಬಗ್ಗೆ ಹೇಳಿದಾಗ  ಚಾಲಕ ವೀರಪ್ಪ ಅವರಿಗೆ ಗುಂಪಿನಲ್ಲಿದ್ದ ಒರ್ವ ವ್ಯಕ್ತಿಯ ಹಲ್ಲೆ ನಡೆಸಿ  ಜೀವ ಬೆದರಿಕೆ ಹಾಕಿದ್ದಾರೆ ಎಂದು  ದೂರಿನಲ್ಲಿ  ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?
June 28, 2025
2:17 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |
June 28, 2025
7:14 AM
by: The Rural Mirror ಸುದ್ದಿಜಾಲ
ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..
June 28, 2025
6:37 AM
by: ದ ರೂರಲ್ ಮಿರರ್.ಕಾಂ
ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..
June 27, 2025
11:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group