ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿರವರೊಂದಿಗೆ ಕರ್ತವ್ಯದ ನಿಮಿತ್ತ ಬಂಟ್ವಾಳ ಪುರಸಭೆಯ ಅಭಿಯಂತರರು ಹಾಗೂ ಚಾಲಕನಿಗೆ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಉದ್ದೇಶ ಪೂರ್ವಕವಾಗಿ ಕರ್ತವ್ಯಕ್ಕೆಅಡ್ಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರು ವಾಹನ ಚಾಲಕ ವೀರಪ್ಪ ಅವರೊಂದಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಯವರು ಕರ್ತವ್ಯದ ನಿಮಿತ್ತ ತೆರಳಿದ್ದರು. ಈ ಸಂದರ್ಭ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಅಂಗಡಿಯೊಂದು ತೆರೆದಿತ್ತು ಹಾಗೂ ಅಂಗಡಿಯ ಎದುರು ಜನರು ಗುಂಪಾಗಿ ಸೇರಿರುವುದು ಕಂಡುಬಂದಿದ್ದು, ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಲಾಕ್ಡೌನ್ ಇದೆ ಎಂದು ಅಂಗಡಿ ಮುಚ್ಚುವಂತೆ ಸೂಚನೆ ನೀಡಿದರು.
ಅಂಗಡಿಯನ್ನು ಮುಚ್ಚದೆ ಕೊರೊನಾ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದಿದ್ದರೂ ಅಂಗಡಿಯನ್ನು ತೆರೆದು ಉದ್ದೇಶ ಪೂರ್ವಕವಾಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ ಪಡಿಸಿದರು ಎಂದು ದೂರಲಾಗಿದೆ. ಈ ಬಗ್ಗೆ ಹೇಳಿದಾಗ ಚಾಲಕ ವೀರಪ್ಪ ಅವರಿಗೆ ಗುಂಪಿನಲ್ಲಿದ್ದ ಒರ್ವ ವ್ಯಕ್ತಿಯ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…