ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿರವರೊಂದಿಗೆ ಕರ್ತವ್ಯದ ನಿಮಿತ್ತ ಬಂಟ್ವಾಳ ಪುರಸಭೆಯ ಅಭಿಯಂತರರು ಹಾಗೂ ಚಾಲಕನಿಗೆ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಉದ್ದೇಶ ಪೂರ್ವಕವಾಗಿ ಕರ್ತವ್ಯಕ್ಕೆಅಡ್ಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರು ವಾಹನ ಚಾಲಕ ವೀರಪ್ಪ ಅವರೊಂದಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಯವರು ಕರ್ತವ್ಯದ ನಿಮಿತ್ತ ತೆರಳಿದ್ದರು. ಈ ಸಂದರ್ಭ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಅಂಗಡಿಯೊಂದು ತೆರೆದಿತ್ತು ಹಾಗೂ ಅಂಗಡಿಯ ಎದುರು ಜನರು ಗುಂಪಾಗಿ ಸೇರಿರುವುದು ಕಂಡುಬಂದಿದ್ದು, ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಲಾಕ್ಡೌನ್ ಇದೆ ಎಂದು ಅಂಗಡಿ ಮುಚ್ಚುವಂತೆ ಸೂಚನೆ ನೀಡಿದರು.
ಅಂಗಡಿಯನ್ನು ಮುಚ್ಚದೆ ಕೊರೊನಾ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದಿದ್ದರೂ ಅಂಗಡಿಯನ್ನು ತೆರೆದು ಉದ್ದೇಶ ಪೂರ್ವಕವಾಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ ಪಡಿಸಿದರು ಎಂದು ದೂರಲಾಗಿದೆ. ಈ ಬಗ್ಗೆ ಹೇಳಿದಾಗ ಚಾಲಕ ವೀರಪ್ಪ ಅವರಿಗೆ ಗುಂಪಿನಲ್ಲಿದ್ದ ಒರ್ವ ವ್ಯಕ್ತಿಯ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…