ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿರವರೊಂದಿಗೆ ಕರ್ತವ್ಯದ ನಿಮಿತ್ತ ಬಂಟ್ವಾಳ ಪುರಸಭೆಯ ಅಭಿಯಂತರರು ಹಾಗೂ ಚಾಲಕನಿಗೆ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಉದ್ದೇಶ ಪೂರ್ವಕವಾಗಿ ಕರ್ತವ್ಯಕ್ಕೆಅಡ್ಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರು ವಾಹನ ಚಾಲಕ ವೀರಪ್ಪ ಅವರೊಂದಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಯವರು ಕರ್ತವ್ಯದ ನಿಮಿತ್ತ ತೆರಳಿದ್ದರು. ಈ ಸಂದರ್ಭ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಅಂಗಡಿಯೊಂದು ತೆರೆದಿತ್ತು ಹಾಗೂ ಅಂಗಡಿಯ ಎದುರು ಜನರು ಗುಂಪಾಗಿ ಸೇರಿರುವುದು ಕಂಡುಬಂದಿದ್ದು, ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಲಾಕ್ಡೌನ್ ಇದೆ ಎಂದು ಅಂಗಡಿ ಮುಚ್ಚುವಂತೆ ಸೂಚನೆ ನೀಡಿದರು.
ಅಂಗಡಿಯನ್ನು ಮುಚ್ಚದೆ ಕೊರೊನಾ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದಿದ್ದರೂ ಅಂಗಡಿಯನ್ನು ತೆರೆದು ಉದ್ದೇಶ ಪೂರ್ವಕವಾಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ ಪಡಿಸಿದರು ಎಂದು ದೂರಲಾಗಿದೆ. ಈ ಬಗ್ಗೆ ಹೇಳಿದಾಗ ಚಾಲಕ ವೀರಪ್ಪ ಅವರಿಗೆ ಗುಂಪಿನಲ್ಲಿದ್ದ ಒರ್ವ ವ್ಯಕ್ತಿಯ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…