ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿರವರೊಂದಿಗೆ ಕರ್ತವ್ಯದ ನಿಮಿತ್ತ ಬಂಟ್ವಾಳ ಪುರಸಭೆಯ ಅಭಿಯಂತರರು ಹಾಗೂ ಚಾಲಕನಿಗೆ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಉದ್ದೇಶ ಪೂರ್ವಕವಾಗಿ ಕರ್ತವ್ಯಕ್ಕೆಅಡ್ಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರು ವಾಹನ ಚಾಲಕ ವೀರಪ್ಪ ಅವರೊಂದಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಯವರು ಕರ್ತವ್ಯದ ನಿಮಿತ್ತ ತೆರಳಿದ್ದರು. ಈ ಸಂದರ್ಭ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಅಂಗಡಿಯೊಂದು ತೆರೆದಿತ್ತು ಹಾಗೂ ಅಂಗಡಿಯ ಎದುರು ಜನರು ಗುಂಪಾಗಿ ಸೇರಿರುವುದು ಕಂಡುಬಂದಿದ್ದು, ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಲಾಕ್ಡೌನ್ ಇದೆ ಎಂದು ಅಂಗಡಿ ಮುಚ್ಚುವಂತೆ ಸೂಚನೆ ನೀಡಿದರು.
ಅಂಗಡಿಯನ್ನು ಮುಚ್ಚದೆ ಕೊರೊನಾ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದಿದ್ದರೂ ಅಂಗಡಿಯನ್ನು ತೆರೆದು ಉದ್ದೇಶ ಪೂರ್ವಕವಾಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ ಪಡಿಸಿದರು ಎಂದು ದೂರಲಾಗಿದೆ. ಈ ಬಗ್ಗೆ ಹೇಳಿದಾಗ ಚಾಲಕ ವೀರಪ್ಪ ಅವರಿಗೆ ಗುಂಪಿನಲ್ಲಿದ್ದ ಒರ್ವ ವ್ಯಕ್ತಿಯ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…