ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿರವರೊಂದಿಗೆ ಕರ್ತವ್ಯದ ನಿಮಿತ್ತ ಬಂಟ್ವಾಳ ಪುರಸಭೆಯ ಅಭಿಯಂತರರು ಹಾಗೂ ಚಾಲಕನಿಗೆ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಉದ್ದೇಶ ಪೂರ್ವಕವಾಗಿ ಕರ್ತವ್ಯಕ್ಕೆಅಡ್ಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರು ವಾಹನ ಚಾಲಕ ವೀರಪ್ಪ ಅವರೊಂದಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಯವರು ಕರ್ತವ್ಯದ ನಿಮಿತ್ತ ತೆರಳಿದ್ದರು. ಈ ಸಂದರ್ಭ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಅಂಗಡಿಯೊಂದು ತೆರೆದಿತ್ತು ಹಾಗೂ ಅಂಗಡಿಯ ಎದುರು ಜನರು ಗುಂಪಾಗಿ ಸೇರಿರುವುದು ಕಂಡುಬಂದಿದ್ದು, ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಲಾಕ್ಡೌನ್ ಇದೆ ಎಂದು ಅಂಗಡಿ ಮುಚ್ಚುವಂತೆ ಸೂಚನೆ ನೀಡಿದರು.
ಅಂಗಡಿಯನ್ನು ಮುಚ್ಚದೆ ಕೊರೊನಾ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದಿದ್ದರೂ ಅಂಗಡಿಯನ್ನು ತೆರೆದು ಉದ್ದೇಶ ಪೂರ್ವಕವಾಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ ಪಡಿಸಿದರು ಎಂದು ದೂರಲಾಗಿದೆ. ಈ ಬಗ್ಗೆ ಹೇಳಿದಾಗ ಚಾಲಕ ವೀರಪ್ಪ ಅವರಿಗೆ ಗುಂಪಿನಲ್ಲಿದ್ದ ಒರ್ವ ವ್ಯಕ್ತಿಯ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…