Advertisement
ಸುದ್ದಿಗಳು

ಬಂಡಾಯದ ವಿರುದ್ಧ ಬಿಜೆಪಿ ಅಧ್ಯಕ್ಷರ ಟಾಂಗ್ !

Share

ಸುಳ್ಯ: ನಗರ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆ ಪಕ್ಷದಲ್ಲಿ ಬಂಡಾಯದ ಮತ್ತು ಅಸಮಾಧಾನದ ಹೊಗೆಯೆಬ್ಬಿಸಿದ್ದವರಿಗೆ ಬಿಜೆಪಿ ಅಧ್ಯಕ್ಷರು ಎಚ್ಚರಿಕೆಯ ಟಾಂಗ್ ನೀಡಿದ್ದಾರೆ. ನಗರ ಪಂಚಾಯತ್ ಚುನಾವಣೆಯಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದಾಗ ಬಿಜೆಪಿಯ ಕೆಲವು ಮುಖಂಡರಿಂದ ಮತ್ತು ಟಿಕೆಟ್ ಆಕಾಂಕ್ಷಿಗಳಿಂದ ಅಸಮಾಧಾನ, ಆಕ್ರೋಶ ವ್ಯಕ್ತವಾಗಿತ್ತು. ಬಂಡಾಯವಾಗಿ ಅಭ್ಯರ್ಥಿಗಳನ್ನು ಕಣಕ್ಕೂ ಇಳಿಸಿದ್ದರು. ಚುನಾವಣಾ ಫಲಿತಾಂಶ ಬಂದ ಬಳಿಕ ಇದರ ವಿರುದ್ಧ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ ಸ್ಟ್ರಾಂಗ್ ಆಗಿಯೇ ಟಾಂಗ್ ನೀಡಿದ್ದಾರೆ.

ಹಲವು ವರ್ಷ ಅಧಿಕಾರವನ್ನು ಅನುಭವಿಸಿದವರೇ ಹೊಸಬರಿಗೆ ಅವಕಾಶ ನೀಡುವ ಪಕ್ಷದ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಭ್ಯರ್ಥಿ ಆಯ್ಕೆಯ ಸಂದರ್ಭದಲ್ಲಿ ಕೆಲವು ‌ನಾಯಕರು ತಳೆದ ನಿಲುವು ಅವರ ಮಾತುಗಳು ತೀವ್ರ ನೋವು ತಂದಿತ್ತು. ನಾವು ಯಾರು ಕೂಡ ವೈಯುಕ್ತಿಕ ಹಿತಾಸಕ್ತಿಯಿಂದ ಕೆಲಸ ಮಾಡುತ್ತಿಲ್ಲ. ಎಲ್ಲರೂ ಪಕ್ಷಕ್ಕಾಗಿ, ಸಂಘಟನೆಗಾಗಿ ಕೆಲಸ ಮಾಡುತ್ತೇವೆ. ಪಕ್ಷದ ತೀರ್ಮಾನ ಸರಿಯಾಗಿತ್ತು ಎಂಬುದಕ್ಕೆ ಮತದಾರರ ತೀರ್ಪೇ ಸಾಕ್ಷಿ ಎಂದು ಬಿಜೆಪಿ ವಿಜಯೋತ್ಸವದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ವಳಲಂಬೆ ಹೇಳಿದರು. ಪಕ್ಷದೊಳಗಿನ ಬಂಡಾಯದ ಮತ್ತು ಅಸಮಾಧಾನದ ವಿರುದ್ಧ ಇದೇ ಪ್ರಥಮವಾಗಿ ಖಡಕ್ಕಾಗಿ ಧ್ವನಿ ಎತ್ತಿದ ಬಿಜೆಪಿ ಅಧ್ಯಕ್ಷರ ಮಾತಿಗೆ ಕಾರ್ಯಕರ್ತರು ಚಪ್ಪಾಳೆಯ ಮೂಲಕ ಸಾಥ್ ನೀಡಿದರು.

ಎರಡು ಸ್ಥಾನ ಕಡಿಮೆಯಾಗಲು ಅಸಮಾಧಾನ ಕಾರಣವೇ.‌?

ನಗರ ಪಂಚಾಯತ್ ಚುನಾವಣೆಯಲ್ಲಿ 16 ಸ್ಥಾನ ಗೆಲ್ಲುವುದು ಖಚಿತ ಎಂದು ಬಿಜೆಪಿ ಅಧ್ಯಕ್ಷರು ಸೇರಿದಂತೆ ಎಲ್ಲಾ ನಾಯಕರೂ ಹೇಳಿದ್ದರು. ಆದರೆ ಫಲಿತಾಂಶ ಬಂದಾಗ ಎರಡು ಸ್ಥಾನ ಕಡಿಮೆಯಾಗಿ 16 ಸ್ಥಾನ ಬಂದಿತ್ತು. ಮೂರನೇ ವಾರ್ಡ್ ಜಯನಗರ ಸೇರಿದಂತೆ ಗೆಲುವು ನಿಶ್ಚಿತ ಎಂದು ಹೇಳಲಾಗಿದ್ದ ಒಂದೆರಡು ವಾರ್ಡ್ ಗಳಲ್ಲಿ ಬಿಜೆಪಿ ಸೋಲಲು ಅಸಮಾಧಾನ ಕಾರಣವೇ ಎಂಬ ಮಾತುಗಳು ಕೇಳಿ ಬರುತಿದೆ‌. ಆದರೆ ಬಂಡಾಯದ ಬಿಸಿ ತಟ್ಟಿದ್ದ ಕೆಲವು ವಾರ್ಡ್ ಗಳಲ್ಲಿ ಅದನ್ನು ಮೀರಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದೂ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

9 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

13 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

14 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

23 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 days ago