ಬಜರಂಗದಳದ ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್ನ ಸಂಗ್ರೂರ್ ಸ್ಥಳೀಯ ನ್ಯಾಯಾಲಯ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿಯಾಗಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಯೊಂದಿಗೆ ಹೋಲಿಸಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಇದು ಅಪಾರ ಕಾರ್ಯಕರ್ತರಿಗೆ ಮಾಡಿರುವ ಅಪಮಾನವಾಗಿದೆ ಎಂದು ಹಿಂದೂ ಸುರಕ್ಷಾ ಪರಿಷತ್ ಭಜದಳ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇತ್ತೀಚೆಗೆ ನಡೆದ ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಖರ್ಗೆಯವರು ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ದಾರೆ. ಇದು ಅವಹೇಳನಕಾರಿ ವಿಚಾರವಾಗಿದೆ ಎಂದು ಅರ್ಜಿದಾರರು ಆರೋಪಿಸಿ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಹಿತೇಶ್ ಅವರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಮೂರ್ತಿ ರಮಣದೀಪ್ ಕೌರ್ ಖರ್ಗೆಯವರಿಗೆ ಸಮನ್ಸ್ ನೀಡಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…