ಬಜರಂಗದಳದ ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್ನ ಸಂಗ್ರೂರ್ ಸ್ಥಳೀಯ ನ್ಯಾಯಾಲಯ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿಯಾಗಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಯೊಂದಿಗೆ ಹೋಲಿಸಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಇದು ಅಪಾರ ಕಾರ್ಯಕರ್ತರಿಗೆ ಮಾಡಿರುವ ಅಪಮಾನವಾಗಿದೆ ಎಂದು ಹಿಂದೂ ಸುರಕ್ಷಾ ಪರಿಷತ್ ಭಜದಳ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇತ್ತೀಚೆಗೆ ನಡೆದ ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಖರ್ಗೆಯವರು ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ದಾರೆ. ಇದು ಅವಹೇಳನಕಾರಿ ವಿಚಾರವಾಗಿದೆ ಎಂದು ಅರ್ಜಿದಾರರು ಆರೋಪಿಸಿ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಹಿತೇಶ್ ಅವರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಮೂರ್ತಿ ರಮಣದೀಪ್ ಕೌರ್ ಖರ್ಗೆಯವರಿಗೆ ಸಮನ್ಸ್ ನೀಡಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…