Advertisement
ನಿಧನ‌ ಸುದ್ದಿಗಳು

ಬಜರಂಗದಳ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ನಿಧನ

Share

ಬೆಂಗಳೂರು:  ಬಜರಂಗದಳ ಮಾಜಿ ಸಂಚಾಲಕ,  ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ (48)  ಶನಿವಾರ ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದರು. ರಾಜ್ಯ ಬಜರಂಗದಳದ ಸಂಚಾಲಕರಾಗಿದ್ದ ಅವರು  ವಿವಿಧ ಹೋರಾಟಗಳಲ್ಲಿ, ಹಿಂದೂಪರವಾದ ಧರಣಿ, ಹೋರಾಟಗಳಲ್ಲಿ ಸಕ್ರಿಯವಾಗಿದ್ದರು. 2008 ರಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಿದ ಸಂಬಂಧ ಬಂಧನಕ್ಕೊಳಗಾಗಿದ್ದರು. ಅದಾದ ನಂತರ 2008 ರಲ್ಲಿ ಸಂಘಪರಿವಾರದಿಂದ ಹೊರಬಂದಿದ್ದರು. ಬಳಿಕ 2011 ರಲ್ಲಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದರು.  ವಿವಿಧ ಹೋರಾಟಗಳಲ್ಲಿ  ಮುಂಚೂಣಿಯಲ್ಲಿದ್ದು ಈಚೆಗೆ ಸಿ ಎ ಎ ವಿರುದ್ಧದ ಹೋರಾಟಗಳಲ್ಲಿ  ಸಕ್ರಿಯವಾಗಿದ್ದರು.

ಚಿಕ್ಕಮಗಳೂರಿನ ಕೊಪ್ಪದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago