ಬೆಂಗಳೂರು: ಬಜರಂಗದಳ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ (48) ಶನಿವಾರ ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದರು. ರಾಜ್ಯ ಬಜರಂಗದಳದ ಸಂಚಾಲಕರಾಗಿದ್ದ ಅವರು ವಿವಿಧ ಹೋರಾಟಗಳಲ್ಲಿ, ಹಿಂದೂಪರವಾದ ಧರಣಿ, ಹೋರಾಟಗಳಲ್ಲಿ ಸಕ್ರಿಯವಾಗಿದ್ದರು. 2008 ರಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಿದ ಸಂಬಂಧ ಬಂಧನಕ್ಕೊಳಗಾಗಿದ್ದರು. ಅದಾದ ನಂತರ 2008 ರಲ್ಲಿ ಸಂಘಪರಿವಾರದಿಂದ ಹೊರಬಂದಿದ್ದರು. ಬಳಿಕ 2011 ರಲ್ಲಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದರು. ವಿವಿಧ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು ಈಚೆಗೆ ಸಿ ಎ ಎ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯವಾಗಿದ್ದರು.
ಚಿಕ್ಕಮಗಳೂರಿನ ಕೊಪ್ಪದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…