ಬದಿಯಡ್ಕದಲ್ಲಿ ಇಂದು ಹಲಸು ಮೇಳದ ಗೌಜಿ : ಪುತ್ತೂರಿನಲ್ಲಿ ಜೂ.15 ರಂದು ಹಲಸು ಸಾರ ಮೇಳ

June 8, 2019
9:00 AM

ಸುಳ್ಯ: ಬಡಿಯಡ್ಕದಲ್ಲಿ ಇಂದು ಹಲಸು ಮೇಳದ ಗೌಜಿ ನಡೆಯಲಿದೆ. ಇಂದು ಇಡೀ ದಿನ ಹಲಸಿನದ್ದೇ ಮಾತುಕತೆ ನಡೆಯಲಿದೆ. ಇಲ್ಲಿ  ವಿಶೇಷವಾಗಿ ಗೋವಿಗಾಗಿ ಹಲಸು ಮೇಳ ನಡೆಯುತ್ತಿರುವುದು  ವಿಶೇಷವಾಗಿದೆ. ಗೋವಿಗೆ ಹಲಸನ್ನೇ ಗೋಗ್ರಾಸ ನೀಡುವ ಬಗ್ಗೆಯೂ ಇಲ್ಲಿ  ಮಾತುಕತೆ ನಡೆಯುತ್ತಿದೆ. ಹೀಗಾಗಿ ಹಲಸು ಈ ಬಾರಿ ಅತ್ಯಂತ ಜನಪ್ರತಿಯವಾಗುತ್ತಿದೆ.

Advertisement
Advertisement

ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠ ಇಂದು ಬೆಳಗ್ಗಿನಿಂದ ಸಂಜೆಯವರೆಗೆ ಹಲಸು ಮೇಳ ನಡೆಯುತ್ತದೆ. ಹಲಸು ಮೌಲ್ಯ ವರ್ಧನೆ, ಹಲಸು ಮಾತುಕತೆ , ತಿಂಡಿಗಳ ಪ್ರದರ್ಶನ ಇಲ್ಲಿರುತ್ತದೆ.

ಹಲಸು ಮೇಳದಲ್ಲಿ ಏನೇನಿದೆ?…..

ಹಲಸಿನ ಕಾಯಿ ದೋಸೆ, ಹಣ್ಣಿನ ದೋಸೆ, ಹಲಸಿನ ಹಣ್ಣಿನ ಕೊಟ್ಟಿಗೆ, ಗೆಣಸಲೆ , ಹಲಸಿನ ಹಣ್ಣಿನ, ಕಾಯಿಯ ಗುಳಿ ಅಪ್ಪ, ಹಲಸಿನ ಹಣ್ಣಿನ, ಕಾಯಿ ಸೇಮಿಗೆ,
ಹಲಸಿನ ಇಡ್ಲಿ, ಹಲಸಿನ ಬೀಜದ ಹೋಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಬೀಜದ ಹಲ್ವ, ಉಂಡ್ಲಕಾಳು, ಚಿಪ್ಸ್, ಹಪ್ಪಳಗಳು, ಹಲಸಿನ ಕಾಯಿಸೊಳೆ, ಹಣ್ಣಿನ ಸೊಳೆ, ಹಲಸಿನ ಹಣ್ಣಿನ ಡ್ರೈ ಸೊಳೆ, ಹಲಸಿನ ಹಣ್ಣಿನ ಕೇಕ್, ಹಲಸಿನ ಬೀಜದ ಬಿಸ್ಕತ್ತು, ವಡೆ, ಹಲಸಿನ ಸೊಳೆಯ ರೊಟ್ಟಿ, ಹಲಸಿನ ಹಣ್ಣಿನ ಜ್ಯೂಸ್
ಹಲಸಿನ ಹಣ್ಣಿನ ಜೆಲ್ಲಿ ಜಾಮ್, ಹಲಸಿನ ಕೇಕ್,  ಪಾಯಸಗಳು , ಬೇಳೆಯ ಪಾಯಸ, ಪೆರಟಿ ಪಾಯಸ, ಜೆರಡಿ ಪಾಯಸ, ಹಣ್ಣಿನ ಪಾಯಸ, ಹಲಸಿನ ಚಿಳ್ಳೆಯಲ್ಲಿ ಪಾಯಸ, ಹಲಸಿನ ಕಾಯಿ ಚಿಪ್ಸ್, ಹಲಸಿನ ಬೀಜದ ರಸಂ ಪುಡಿ, ಹಲಸಿನ ಐಸ್ ಕ್ರೀಂ, ಹಲಸಿನ ಐಸ್ ಕ್ಯಾಂಡಿಗಳು, ಹಲಸಿನ ಗುಜ್ಜೆ ಮಂಚೂರಿ, ಹಲಸಿನ ಗುಜ್ಜೆ ಕಬಾಬ್, ವಿವಿಧ ನಮೂನೆಯ ಸಮೂಸಗಳು, ಹಲಸಿನ ಗುಜ್ಜೆ ಪಲಾವು ಇದ್ದರೆ.  ವಿವಿಧ ಜಾತಿಯ ಹಲಸಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ. ಹಲವು ರೀತಿಯ ಹಲಸಿನ ವಿವಿಧ ರೀತಿಯ ತಿಂಡಿ ತಿನಸುಗಳು, ಉತ್ಪನ್ನಗಳು ಮೇಳದಲ್ಲಿ  ಮಾರಾಟಕ್ಕೂ ಲಭ್ಯವಿದೆ.

ಇಲ್ಲಿ  ವಿಶೇಷ ಎಂದರೆ ಹಬ್ಬದಲ್ಲಿ  ಮಾರಾಟವಾಗುವ ಹಲಸು ಉತ್ಪನ್ನಗಳಲ್ಲಿ  ಒಮದು ಪಾಲು ಗೋಶಾಲೆಯ ಅಭಿವೃದ್ಧಿಗೂ ಬಳಕೆಯಾಗುತ್ತದೆ.

Advertisement

 

ಜೂ.15 ಹಾಗೂ 16 ರಂದು ಪುತ್ತೂರಿನಲ್ಲಿ :

ಜೂನ್.15 ಹಾಗೂ 16 ರಂದು ಪುತ್ತೂರಿನಲ್ಲಿ  ಹಲಸು ಸಾರ ಮೇಳ ನಡೆಯಲಿದೆ. ಹಲಸು ಸ್ನೇಹಿ ಕೂಟದ ವತಿಯಿಂದ ನಡೆಯುವ ಹಲಸು ಸಾರ ಮೇಳ ಕೂಡಾ ವಿಶೇಷ ರೀತಿಯಲ್ಲಿ  ನಡೆಯಲಿದೆ. ವಿಶೇಷವಾಗಿ ಐ ಐ ಎಚ್ ಆರ್ ಬೆಂಗಳೂರು ಸಂಸ್ಥೆ ಕೂಡಾ ಆಗಮಿಸಿ ಮಾಹಿತಿ ನೀಡಲಿದೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ
ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ
May 29, 2025
7:07 AM
by: The Rural Mirror ಸುದ್ದಿಜಾಲ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group