Advertisement
ಮಾಹಿತಿ

ಬದಿಯಡ್ಕದಲ್ಲಿ ಇಂದು ಹಲಸು ಮೇಳದ ಗೌಜಿ : ಪುತ್ತೂರಿನಲ್ಲಿ ಜೂ.15 ರಂದು ಹಲಸು ಸಾರ ಮೇಳ

Share

ಸುಳ್ಯ: ಬಡಿಯಡ್ಕದಲ್ಲಿ ಇಂದು ಹಲಸು ಮೇಳದ ಗೌಜಿ ನಡೆಯಲಿದೆ. ಇಂದು ಇಡೀ ದಿನ ಹಲಸಿನದ್ದೇ ಮಾತುಕತೆ ನಡೆಯಲಿದೆ. ಇಲ್ಲಿ  ವಿಶೇಷವಾಗಿ ಗೋವಿಗಾಗಿ ಹಲಸು ಮೇಳ ನಡೆಯುತ್ತಿರುವುದು  ವಿಶೇಷವಾಗಿದೆ. ಗೋವಿಗೆ ಹಲಸನ್ನೇ ಗೋಗ್ರಾಸ ನೀಡುವ ಬಗ್ಗೆಯೂ ಇಲ್ಲಿ  ಮಾತುಕತೆ ನಡೆಯುತ್ತಿದೆ. ಹೀಗಾಗಿ ಹಲಸು ಈ ಬಾರಿ ಅತ್ಯಂತ ಜನಪ್ರತಿಯವಾಗುತ್ತಿದೆ.

ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠ ಇಂದು ಬೆಳಗ್ಗಿನಿಂದ ಸಂಜೆಯವರೆಗೆ ಹಲಸು ಮೇಳ ನಡೆಯುತ್ತದೆ. ಹಲಸು ಮೌಲ್ಯ ವರ್ಧನೆ, ಹಲಸು ಮಾತುಕತೆ , ತಿಂಡಿಗಳ ಪ್ರದರ್ಶನ ಇಲ್ಲಿರುತ್ತದೆ.

ಹಲಸು ಮೇಳದಲ್ಲಿ ಏನೇನಿದೆ?…..

ಹಲಸಿನ ಕಾಯಿ ದೋಸೆ, ಹಣ್ಣಿನ ದೋಸೆ, ಹಲಸಿನ ಹಣ್ಣಿನ ಕೊಟ್ಟಿಗೆ, ಗೆಣಸಲೆ , ಹಲಸಿನ ಹಣ್ಣಿನ, ಕಾಯಿಯ ಗುಳಿ ಅಪ್ಪ, ಹಲಸಿನ ಹಣ್ಣಿನ, ಕಾಯಿ ಸೇಮಿಗೆ,
ಹಲಸಿನ ಇಡ್ಲಿ, ಹಲಸಿನ ಬೀಜದ ಹೋಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಬೀಜದ ಹಲ್ವ, ಉಂಡ್ಲಕಾಳು, ಚಿಪ್ಸ್, ಹಪ್ಪಳಗಳು, ಹಲಸಿನ ಕಾಯಿಸೊಳೆ, ಹಣ್ಣಿನ ಸೊಳೆ, ಹಲಸಿನ ಹಣ್ಣಿನ ಡ್ರೈ ಸೊಳೆ, ಹಲಸಿನ ಹಣ್ಣಿನ ಕೇಕ್, ಹಲಸಿನ ಬೀಜದ ಬಿಸ್ಕತ್ತು, ವಡೆ, ಹಲಸಿನ ಸೊಳೆಯ ರೊಟ್ಟಿ, ಹಲಸಿನ ಹಣ್ಣಿನ ಜ್ಯೂಸ್
ಹಲಸಿನ ಹಣ್ಣಿನ ಜೆಲ್ಲಿ ಜಾಮ್, ಹಲಸಿನ ಕೇಕ್,  ಪಾಯಸಗಳು , ಬೇಳೆಯ ಪಾಯಸ, ಪೆರಟಿ ಪಾಯಸ, ಜೆರಡಿ ಪಾಯಸ, ಹಣ್ಣಿನ ಪಾಯಸ, ಹಲಸಿನ ಚಿಳ್ಳೆಯಲ್ಲಿ ಪಾಯಸ, ಹಲಸಿನ ಕಾಯಿ ಚಿಪ್ಸ್, ಹಲಸಿನ ಬೀಜದ ರಸಂ ಪುಡಿ, ಹಲಸಿನ ಐಸ್ ಕ್ರೀಂ, ಹಲಸಿನ ಐಸ್ ಕ್ಯಾಂಡಿಗಳು, ಹಲಸಿನ ಗುಜ್ಜೆ ಮಂಚೂರಿ, ಹಲಸಿನ ಗುಜ್ಜೆ ಕಬಾಬ್, ವಿವಿಧ ನಮೂನೆಯ ಸಮೂಸಗಳು, ಹಲಸಿನ ಗುಜ್ಜೆ ಪಲಾವು ಇದ್ದರೆ.  ವಿವಿಧ ಜಾತಿಯ ಹಲಸಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ. ಹಲವು ರೀತಿಯ ಹಲಸಿನ ವಿವಿಧ ರೀತಿಯ ತಿಂಡಿ ತಿನಸುಗಳು, ಉತ್ಪನ್ನಗಳು ಮೇಳದಲ್ಲಿ  ಮಾರಾಟಕ್ಕೂ ಲಭ್ಯವಿದೆ.

ಇಲ್ಲಿ  ವಿಶೇಷ ಎಂದರೆ ಹಬ್ಬದಲ್ಲಿ  ಮಾರಾಟವಾಗುವ ಹಲಸು ಉತ್ಪನ್ನಗಳಲ್ಲಿ  ಒಮದು ಪಾಲು ಗೋಶಾಲೆಯ ಅಭಿವೃದ್ಧಿಗೂ ಬಳಕೆಯಾಗುತ್ತದೆ.

 

ಜೂ.15 ಹಾಗೂ 16 ರಂದು ಪುತ್ತೂರಿನಲ್ಲಿ :

ಜೂನ್.15 ಹಾಗೂ 16 ರಂದು ಪುತ್ತೂರಿನಲ್ಲಿ  ಹಲಸು ಸಾರ ಮೇಳ ನಡೆಯಲಿದೆ. ಹಲಸು ಸ್ನೇಹಿ ಕೂಟದ ವತಿಯಿಂದ ನಡೆಯುವ ಹಲಸು ಸಾರ ಮೇಳ ಕೂಡಾ ವಿಶೇಷ ರೀತಿಯಲ್ಲಿ  ನಡೆಯಲಿದೆ. ವಿಶೇಷವಾಗಿ ಐ ಐ ಎಚ್ ಆರ್ ಬೆಂಗಳೂರು ಸಂಸ್ಥೆ ಕೂಡಾ ಆಗಮಿಸಿ ಮಾಹಿತಿ ನೀಡಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

54 minutes ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 hour ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

8 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

19 hours ago