Advertisement

ಬಡ್ಡಡ್ಕ ಶಾಲೆಯಲ್ಲಿ ಪಾರಂಪರಿಕ ಮತಗಟ್ಟೆ

Share

ಸುಳ್ಯ: ಲೋಕಸಭಾ ಚುನಾವಣೆಯ ಒಂದು ವಿಶೇಷ ಆಕರ್ಷಣೆ ಪಾರಂಪರಿಕ ಮತಗಟ್ಟೆ. ಸುಳ್ಯ ವಿಧಾನಸಭಾ ಕ್ಷೇತ್ರದ 209 ನೇ ಮತಗಟ್ಟೆಯನ್ನು ಈ ಬಾರಿ ಪಾರಂಪರಿಕ ಮತಗಟ್ಟೆ ಎಂದು ಗುರುತಿಸಲಾಗಿತ್ತು. ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಪಾರಂಪರಿಕ ಮೆರುಗು ಪಡೆದು ಶೃಂಗಶರಗೊಂಡು ಮಧುವಣಗಿತ್ತಿಯಂತೆ ಆಕರ್ಷಣೆ ಪಡೆದಿತ್ತು. ಮತಗಟ್ಟೆಯ ಮುಂಭಾಗದಲ್ಲಿ ತೆಂಗಿನ ಮಡಲು, ಚಾಪೆ ಮತ್ತಿತರ ಪಾರಂಪರಿಕ ವಸ್ತುಗಳನ್ನು ಬಳಸಿ ಅಲಂಕರಿಸಲಾಗಿತ್ತು. ಅಲ್ಲದೆ ಶಾಲೆಯ ಎದುರು ಭಾಗದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಮತದಾರರನ್ನು ಸೆಳೆದು ಮತದಾನ ಪ್ರಮಾಣವನ್ನು ಹೆಚ್ಚಿಸುವ ದೃಷ್ಠಿಯಿಂದ ಮತಗಟ್ಟೆಗಳಲ್ಲಿ ವಿಶೇಷ ಆಕರ್ಷಣೆಯನ್ನು ಮಾಡಲಾಗಿತ್ತು. ಪ್ರಕೃತಿ ಸಿರಿಯ ಮಧ್ಯೆ ಇರುವ ಗಡಿ ಪ್ರದೇಶದ ಶಾಲೆಯಲ್ಲಿನ ಪಾರಂಪರಿಕ ಮತಗಟ್ಟೆಯಲ್ಲಿ ಬೆಳಗ್ಗಿನಿಂದಲೇ ಉತ್ಸಾಹ ಕಳೆ ಕಟ್ಟಿತ್ತು. ಬೆಳಗ್ಗಿನಿಂದಲೇ ಮತದಾರರು ಉತ್ಸಾಹದಿಂದ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಅಲ್ಲದೆ ಮತಗಟ್ಟೆಯಲ್ಲಿ ಬರುವ ಮತದಾರರಿಗೆ ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನೂ ಮಾಡಲಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

7 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

7 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

7 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

7 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

8 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

8 hours ago