Advertisement

ಬಡ್ಡಡ್ಕ ಶಾಲೆಯಲ್ಲಿ ಪಾರಂಪರಿಕ ಮತಗಟ್ಟೆ

Share

ಸುಳ್ಯ: ಲೋಕಸಭಾ ಚುನಾವಣೆಯ ಒಂದು ವಿಶೇಷ ಆಕರ್ಷಣೆ ಪಾರಂಪರಿಕ ಮತಗಟ್ಟೆ. ಸುಳ್ಯ ವಿಧಾನಸಭಾ ಕ್ಷೇತ್ರದ 209 ನೇ ಮತಗಟ್ಟೆಯನ್ನು ಈ ಬಾರಿ ಪಾರಂಪರಿಕ ಮತಗಟ್ಟೆ ಎಂದು ಗುರುತಿಸಲಾಗಿತ್ತು. ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಪಾರಂಪರಿಕ ಮೆರುಗು ಪಡೆದು ಶೃಂಗಶರಗೊಂಡು ಮಧುವಣಗಿತ್ತಿಯಂತೆ ಆಕರ್ಷಣೆ ಪಡೆದಿತ್ತು. ಮತಗಟ್ಟೆಯ ಮುಂಭಾಗದಲ್ಲಿ ತೆಂಗಿನ ಮಡಲು, ಚಾಪೆ ಮತ್ತಿತರ ಪಾರಂಪರಿಕ ವಸ್ತುಗಳನ್ನು ಬಳಸಿ ಅಲಂಕರಿಸಲಾಗಿತ್ತು. ಅಲ್ಲದೆ ಶಾಲೆಯ ಎದುರು ಭಾಗದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಮತದಾರರನ್ನು ಸೆಳೆದು ಮತದಾನ ಪ್ರಮಾಣವನ್ನು ಹೆಚ್ಚಿಸುವ ದೃಷ್ಠಿಯಿಂದ ಮತಗಟ್ಟೆಗಳಲ್ಲಿ ವಿಶೇಷ ಆಕರ್ಷಣೆಯನ್ನು ಮಾಡಲಾಗಿತ್ತು. ಪ್ರಕೃತಿ ಸಿರಿಯ ಮಧ್ಯೆ ಇರುವ ಗಡಿ ಪ್ರದೇಶದ ಶಾಲೆಯಲ್ಲಿನ ಪಾರಂಪರಿಕ ಮತಗಟ್ಟೆಯಲ್ಲಿ ಬೆಳಗ್ಗಿನಿಂದಲೇ ಉತ್ಸಾಹ ಕಳೆ ಕಟ್ಟಿತ್ತು. ಬೆಳಗ್ಗಿನಿಂದಲೇ ಮತದಾರರು ಉತ್ಸಾಹದಿಂದ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಅಲ್ಲದೆ ಮತಗಟ್ಟೆಯಲ್ಲಿ ಬರುವ ಮತದಾರರಿಗೆ ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನೂ ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

13 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

16 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

17 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago