Advertisement

ಬಡ್ಡಡ್ಕ ಶಾಲೆಯಲ್ಲಿ ಪಾರಂಪರಿಕ ಮತಗಟ್ಟೆ

Share

ಸುಳ್ಯ: ಲೋಕಸಭಾ ಚುನಾವಣೆಯ ಒಂದು ವಿಶೇಷ ಆಕರ್ಷಣೆ ಪಾರಂಪರಿಕ ಮತಗಟ್ಟೆ. ಸುಳ್ಯ ವಿಧಾನಸಭಾ ಕ್ಷೇತ್ರದ 209 ನೇ ಮತಗಟ್ಟೆಯನ್ನು ಈ ಬಾರಿ ಪಾರಂಪರಿಕ ಮತಗಟ್ಟೆ ಎಂದು ಗುರುತಿಸಲಾಗಿತ್ತು. ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಪಾರಂಪರಿಕ ಮೆರುಗು ಪಡೆದು ಶೃಂಗಶರಗೊಂಡು ಮಧುವಣಗಿತ್ತಿಯಂತೆ ಆಕರ್ಷಣೆ ಪಡೆದಿತ್ತು. ಮತಗಟ್ಟೆಯ ಮುಂಭಾಗದಲ್ಲಿ ತೆಂಗಿನ ಮಡಲು, ಚಾಪೆ ಮತ್ತಿತರ ಪಾರಂಪರಿಕ ವಸ್ತುಗಳನ್ನು ಬಳಸಿ ಅಲಂಕರಿಸಲಾಗಿತ್ತು. ಅಲ್ಲದೆ ಶಾಲೆಯ ಎದುರು ಭಾಗದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಮತದಾರರನ್ನು ಸೆಳೆದು ಮತದಾನ ಪ್ರಮಾಣವನ್ನು ಹೆಚ್ಚಿಸುವ ದೃಷ್ಠಿಯಿಂದ ಮತಗಟ್ಟೆಗಳಲ್ಲಿ ವಿಶೇಷ ಆಕರ್ಷಣೆಯನ್ನು ಮಾಡಲಾಗಿತ್ತು. ಪ್ರಕೃತಿ ಸಿರಿಯ ಮಧ್ಯೆ ಇರುವ ಗಡಿ ಪ್ರದೇಶದ ಶಾಲೆಯಲ್ಲಿನ ಪಾರಂಪರಿಕ ಮತಗಟ್ಟೆಯಲ್ಲಿ ಬೆಳಗ್ಗಿನಿಂದಲೇ ಉತ್ಸಾಹ ಕಳೆ ಕಟ್ಟಿತ್ತು. ಬೆಳಗ್ಗಿನಿಂದಲೇ ಮತದಾರರು ಉತ್ಸಾಹದಿಂದ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಅಲ್ಲದೆ ಮತಗಟ್ಟೆಯಲ್ಲಿ ಬರುವ ಮತದಾರರಿಗೆ ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನೂ ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

4 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

26 minutes ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

16 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago