ಬಡ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಕೈ ಜೋಡಿಸಿರುವ ಸಂಘಟನೆಗಳು

August 10, 2019
3:28 PM

ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಅಡ್ಪಂಗಾಯ ಮಾವಿನ ಪಳ್ಳದಲ್ಲಿ ಗುಡಿಸಲಿನಲ್ಲಿ ವಾಸಿಸುತ್ತಿರುವ ಬಡ ಕುಟುಂಬಕ್ಕೆ ಆಸರೆಯನ್ನು ಒದಗಿಸಲು ವಿವಿಧ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಕೈ ಜೋಡಿಸಿದ್ದಾರೆ.

ಮುರಿದು ಬೀಳಲು ಸಿದ್ಧವಾಗಿದ್ದ ಗುಡಿಸಲಿನಿಂದ ಕುಟುಂಬವನ್ನು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದರು.

ಇದೀಗ ಧರೆಗುರುಳಿದ ಮನೆಯನ್ನು ತೆರವು ಮಾಡಿ ಆದೇ ಜಾಗದಲ್ಲಿ ಒಂದು ಮನೆಯನ್ನು ನಿರ್ಮಿಸಿ ಕೊಡಲು ತಹಶೀಲ್ದಾರ್ ಆಸಕ್ತಿ ವಹಸಿರುವುದಕ್ಕೆ ಯುವ ಬ್ರಿಗೇಡ್, ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡ ತಮ್ಮ ಶ್ರಮದಾನದ ಮೂಲಕ ಕೈ ಜೋಡಿಸಿದ್ದಾರೆ.

ಶುಕ್ರವಾರ ಯುವ ಬ್ರಿಗೆಡ್ ತಂಡದ ಸದಸ್ಯರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಗಳು ಗುಡಿಸಲನ್ನು ತೆರವು ಗೊಳಿಸಿ ಅಲ್ಲಿನ ಪ್ರದೇಶವನ್ನು ಶುಚಿಗೊಳಿಸಿದರು. ಸುತ್ತಲೂ ಹಬ್ಬಿದ ಪೊದೆ ಹಾಗು ಸಣ್ಣ ಪುಟ್ಟ ಬಳ್ಳಿಗಳನ್ನು ತೆರವು ಮಾಡಿದ್ದಾರೆ.

ಶನಿವಾರ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವಿಖಾಯ ಅಡ್ಕ ಇರುವಂಬಳ್ಳ ಶಾಖಾ ತಂಡವು ಮನೆಯ ಅಡಿಪಾಯ ನಿರ್ಮಾಣ ಕಾರ್ಯ ನಡೆಸಿದ್ದಾರೆ.
ಮನೆ ನಿರ್ಮಾಣಕ್ಕೆ ಅಗತ್ಯವಾದ ಸಾಮಾಗ್ರಿಗಳನ್ನು ಮತ್ತು ಸಹಾಯ ಧನವನ್ನು ನೀಡುವ ಮೂಲಕ ಹಲವು ಮಂದಿ ದಾನಿಗಳು ಕೂಡ ಸಹಕಾರ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ,
ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ರೈ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಮನೆ ನಿರ್ಮಾಣ ಕಾರ್ಯವನ್ನು ವೀಕ್ಷಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror