ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಅಡ್ಪಂಗಾಯ ಮಾವಿನ ಪಳ್ಳದಲ್ಲಿ ಗುಡಿಸಲಿನಲ್ಲಿ ವಾಸಿಸುತ್ತಿರುವ ಬಡ ಕುಟುಂಬಕ್ಕೆ ಆಸರೆಯನ್ನು ಒದಗಿಸಲು ವಿವಿಧ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಕೈ ಜೋಡಿಸಿದ್ದಾರೆ.
ಮುರಿದು ಬೀಳಲು ಸಿದ್ಧವಾಗಿದ್ದ ಗುಡಿಸಲಿನಿಂದ ಕುಟುಂಬವನ್ನು ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದರು.
ಇದೀಗ ಧರೆಗುರುಳಿದ ಮನೆಯನ್ನು ತೆರವು ಮಾಡಿ ಆದೇ ಜಾಗದಲ್ಲಿ ಒಂದು ಮನೆಯನ್ನು ನಿರ್ಮಿಸಿ ಕೊಡಲು ತಹಶೀಲ್ದಾರ್ ಆಸಕ್ತಿ ವಹಸಿರುವುದಕ್ಕೆ ಯುವ ಬ್ರಿಗೇಡ್, ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡ ತಮ್ಮ ಶ್ರಮದಾನದ ಮೂಲಕ ಕೈ ಜೋಡಿಸಿದ್ದಾರೆ.
ಶುಕ್ರವಾರ ಯುವ ಬ್ರಿಗೆಡ್ ತಂಡದ ಸದಸ್ಯರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಗಳು ಗುಡಿಸಲನ್ನು ತೆರವು ಗೊಳಿಸಿ ಅಲ್ಲಿನ ಪ್ರದೇಶವನ್ನು ಶುಚಿಗೊಳಿಸಿದರು. ಸುತ್ತಲೂ ಹಬ್ಬಿದ ಪೊದೆ ಹಾಗು ಸಣ್ಣ ಪುಟ್ಟ ಬಳ್ಳಿಗಳನ್ನು ತೆರವು ಮಾಡಿದ್ದಾರೆ.
ಶನಿವಾರ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವಿಖಾಯ ಅಡ್ಕ ಇರುವಂಬಳ್ಳ ಶಾಖಾ ತಂಡವು ಮನೆಯ ಅಡಿಪಾಯ ನಿರ್ಮಾಣ ಕಾರ್ಯ ನಡೆಸಿದ್ದಾರೆ.
ಮನೆ ನಿರ್ಮಾಣಕ್ಕೆ ಅಗತ್ಯವಾದ ಸಾಮಾಗ್ರಿಗಳನ್ನು ಮತ್ತು ಸಹಾಯ ಧನವನ್ನು ನೀಡುವ ಮೂಲಕ ಹಲವು ಮಂದಿ ದಾನಿಗಳು ಕೂಡ ಸಹಕಾರ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ,
ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ರೈ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಮನೆ ನಿರ್ಮಾಣ ಕಾರ್ಯವನ್ನು ವೀಕ್ಷಿಸಿದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…