Advertisement
ಸುದ್ದಿಗಳು

ಬಡ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಕೈ ಜೋಡಿಸಿರುವ ಸಂಘಟನೆಗಳು

Share

ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಅಡ್ಪಂಗಾಯ ಮಾವಿನ ಪಳ್ಳದಲ್ಲಿ ಗುಡಿಸಲಿನಲ್ಲಿ ವಾಸಿಸುತ್ತಿರುವ ಬಡ ಕುಟುಂಬಕ್ಕೆ ಆಸರೆಯನ್ನು ಒದಗಿಸಲು ವಿವಿಧ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಕೈ ಜೋಡಿಸಿದ್ದಾರೆ.

ಮುರಿದು ಬೀಳಲು ಸಿದ್ಧವಾಗಿದ್ದ ಗುಡಿಸಲಿನಿಂದ ಕುಟುಂಬವನ್ನು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದರು.

ಇದೀಗ ಧರೆಗುರುಳಿದ ಮನೆಯನ್ನು ತೆರವು ಮಾಡಿ ಆದೇ ಜಾಗದಲ್ಲಿ ಒಂದು ಮನೆಯನ್ನು ನಿರ್ಮಿಸಿ ಕೊಡಲು ತಹಶೀಲ್ದಾರ್ ಆಸಕ್ತಿ ವಹಸಿರುವುದಕ್ಕೆ ಯುವ ಬ್ರಿಗೇಡ್, ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡ ತಮ್ಮ ಶ್ರಮದಾನದ ಮೂಲಕ ಕೈ ಜೋಡಿಸಿದ್ದಾರೆ.

ಶುಕ್ರವಾರ ಯುವ ಬ್ರಿಗೆಡ್ ತಂಡದ ಸದಸ್ಯರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಗಳು ಗುಡಿಸಲನ್ನು ತೆರವು ಗೊಳಿಸಿ ಅಲ್ಲಿನ ಪ್ರದೇಶವನ್ನು ಶುಚಿಗೊಳಿಸಿದರು. ಸುತ್ತಲೂ ಹಬ್ಬಿದ ಪೊದೆ ಹಾಗು ಸಣ್ಣ ಪುಟ್ಟ ಬಳ್ಳಿಗಳನ್ನು ತೆರವು ಮಾಡಿದ್ದಾರೆ.

ಶನಿವಾರ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವಿಖಾಯ ಅಡ್ಕ ಇರುವಂಬಳ್ಳ ಶಾಖಾ ತಂಡವು ಮನೆಯ ಅಡಿಪಾಯ ನಿರ್ಮಾಣ ಕಾರ್ಯ ನಡೆಸಿದ್ದಾರೆ.
ಮನೆ ನಿರ್ಮಾಣಕ್ಕೆ ಅಗತ್ಯವಾದ ಸಾಮಾಗ್ರಿಗಳನ್ನು ಮತ್ತು ಸಹಾಯ ಧನವನ್ನು ನೀಡುವ ಮೂಲಕ ಹಲವು ಮಂದಿ ದಾನಿಗಳು ಕೂಡ ಸಹಕಾರ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ,
ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ರೈ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಮನೆ ನಿರ್ಮಾಣ ಕಾರ್ಯವನ್ನು ವೀಕ್ಷಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

6 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

6 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

21 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago