Advertisement
Categories: Uncategorized

ಬತ್ತಿದ ಜೀವ ಜಲ : ಒಣಗಿದ ತೋಟಗಳು

Share

ಸುಬ್ರಹ್ಮಣ್ಯ: ಕೆರೆ,ಬಾವಿ,ಹೊಳೆಯಲ್ಲಿ ನೀರಿಲ್ಲ. ಮಳೆ ಬಂದರೂ ನೀರಿನ ಸೆಲೆ ಕಾಣುತ್ತಿಲ್ಲ. ಪರಿಣಾಮವಾಗಿ ತೋಟಗಳು ಒಣಗುತ್ತಿವೆ. ಕೊಳವೆಬಾವಿಯಲ್ಲಿ ನೀರಿದ್ದರೂ ಕರೆಂಟ್ ಇಲ್ಲ. ಹೀಗಾಗಿ ಈಗ ಗ್ರಾಮೀಣ ಭಾಗದಲ್ಲೂ ಸಮಸ್ಯೆ ಹೆಚ್ಚಾಗಿದೆ.

ಸುಮಾರು 8 ತಿಂಗಳ ಹಿಂದೆ ಭಾರೀ ಮಳೆಯ ಕಾರಣದಿಂದ ಅಡಿಕೆ ಕೊಳೆರೋಗದ ಸುದ್ದಿಯಾದರೆ ಈಗ ಅಡಿಕೆ ಮರಕ್ಕೆ ನೀರಿಲ್ಲದೆ ಒಣಗುವ ಸುದ್ದಿ. ಕಳೆದ ಒಂದು ತಿಂಗಳಿನಿಂದ ನೀರಿನ ಕೊರತೆ ಉಂಟಾಗಿ ಕೃಷಿ ಭೂಮಿ ಒಣಗಿದೆ. ಅದರ ಜೊತೆಗೆ ಕುಡಿಯಲೂ ನೀರಿಲ್ಲ. ಇದ್ದ ಅಲ್ಪ ಸ್ವಲ್ಪ ಫಸಲುಗಳು ಬಿಸಿಲಿನ ಝಳಕ್ಕೆ ಸಿಲುಕಿ ನಾಶವಾಗುತ್ತದೆ. ಹಿಂದೆಲ್ಲಾ ಗ್ರಾಮೀಣ ಭಾಗದಲ್ಲಿ ಅಂದರೆ ಮಲೆನಾಡು ಭಾಗದಲ್ಲಿ ಇಂತಹ ಸಮಸ್ಯೆ ಇರಲಿಲ್ಲ. ಆದರೆ ಇತ್ತೀಚೆಗೆ ಕಾಡಂಚಿನ ಪ್ರದೇಶದಲ್ಲೂ ಬರದ ಸ್ಥಿತಿ ಎದುರಾಗುತ್ತಿದೆ. ಈಗೀಗ ವಿದ್ಯುತ್ ಸಮಸ್ಯೆ ಕೂಡಾ ಕೃಷಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

“ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆಯಿಂದ ನೀರಿನ ಆಸರೆಯಿದ್ದರೂ ಅದನ್ನು ಸಮರ್ಪಕವಾಗಿ ಬಳಸುವಲ್ಲಿ ಸಮಸ್ಯೆಯಾಗುತ್ತಿದೆ.ನಿತ್ಯ ವಿದ್ಯುತ್ ಕಣ್ಣುಮುಚ್ಚಾಲೆಯಿಂದಾಗಿ ನೀರಿನ ಸಮಸ್ಯೆ ಇಲ್ಲದ ಕಡೆಯೂ ಸಮಸ್ಯೆ ಎದರುರಾಗಿದೆ. ಸಮರ್ಪಕ ವಿದ್ಯುತ್ ವ್ಯವಸ್ಥೆ ಇದ್ದರೆ ನೀರಿನ ಪೂರೈಕೆ ಯಾವುದೇ ಸಮಸ್ಯೆ ಎದುರಾಗದು” ಎಂದು “ಸುಳ್ಯಸುದ್ದಿ.ಕಾಂ”  ನೊಂದಿಗೆ ಕೃಷಿಕ ಸುರೇಶ್ಚಂದ್ರ ಹೇಳಿದರು.

“ಇರುವ ವಿದ್ಯುತ್ ಸರಿಯಾಗಿ ನೀಡಿದರೆ ಸಮಸ್ಯೆ ಇಲ್ಲ. ಹಗಲು 4 ಗಂಟೆ ಪಂಪ್‍ಗೆ ವಿದ್ಯುತ್ ಸಿಕ್ಕಿದರೆ ರಾತ್ರಿ ವೇಳೆ 3 ಗಂಟೆ ಅಂದರೂ ಅಷ್ಟು ಸಮಯ ಲಭ್ಯವಾಗುತ್ತಿಲ್ಲ. ಹೀಗಾಗಿ ಮತ್ತಷ್ಟು ಸಮಸ್ಯೆ” ಎಂದು “ಸುಳ್ಯಸುದ್ದಿ.ಕಾಂ” ನೊಂದಿಗೆ ಕೃಷಿಕ ವೆಂಕಪ್ಪ ಗೌಡ ತಮ್ಮ ಅಳಲು ತೋಡಿಕೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 hour ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

6 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

15 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

16 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

16 hours ago