Categories: Uncategorized

ಬತ್ತಿದ ಜೀವ ಜಲ : ಒಣಗಿದ ತೋಟಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕೆರೆ,ಬಾವಿ,ಹೊಳೆಯಲ್ಲಿ ನೀರಿಲ್ಲ. ಮಳೆ ಬಂದರೂ ನೀರಿನ ಸೆಲೆ ಕಾಣುತ್ತಿಲ್ಲ. ಪರಿಣಾಮವಾಗಿ ತೋಟಗಳು ಒಣಗುತ್ತಿವೆ. ಕೊಳವೆಬಾವಿಯಲ್ಲಿ ನೀರಿದ್ದರೂ ಕರೆಂಟ್ ಇಲ್ಲ. ಹೀಗಾಗಿ ಈಗ ಗ್ರಾಮೀಣ ಭಾಗದಲ್ಲೂ ಸಮಸ್ಯೆ ಹೆಚ್ಚಾಗಿದೆ.

Advertisement
Advertisement

ಸುಮಾರು 8 ತಿಂಗಳ ಹಿಂದೆ ಭಾರೀ ಮಳೆಯ ಕಾರಣದಿಂದ ಅಡಿಕೆ ಕೊಳೆರೋಗದ ಸುದ್ದಿಯಾದರೆ ಈಗ ಅಡಿಕೆ ಮರಕ್ಕೆ ನೀರಿಲ್ಲದೆ ಒಣಗುವ ಸುದ್ದಿ. ಕಳೆದ ಒಂದು ತಿಂಗಳಿನಿಂದ ನೀರಿನ ಕೊರತೆ ಉಂಟಾಗಿ ಕೃಷಿ ಭೂಮಿ ಒಣಗಿದೆ. ಅದರ ಜೊತೆಗೆ ಕುಡಿಯಲೂ ನೀರಿಲ್ಲ. ಇದ್ದ ಅಲ್ಪ ಸ್ವಲ್ಪ ಫಸಲುಗಳು ಬಿಸಿಲಿನ ಝಳಕ್ಕೆ ಸಿಲುಕಿ ನಾಶವಾಗುತ್ತದೆ. ಹಿಂದೆಲ್ಲಾ ಗ್ರಾಮೀಣ ಭಾಗದಲ್ಲಿ ಅಂದರೆ ಮಲೆನಾಡು ಭಾಗದಲ್ಲಿ ಇಂತಹ ಸಮಸ್ಯೆ ಇರಲಿಲ್ಲ. ಆದರೆ ಇತ್ತೀಚೆಗೆ ಕಾಡಂಚಿನ ಪ್ರದೇಶದಲ್ಲೂ ಬರದ ಸ್ಥಿತಿ ಎದುರಾಗುತ್ತಿದೆ. ಈಗೀಗ ವಿದ್ಯುತ್ ಸಮಸ್ಯೆ ಕೂಡಾ ಕೃಷಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

“ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆಯಿಂದ ನೀರಿನ ಆಸರೆಯಿದ್ದರೂ ಅದನ್ನು ಸಮರ್ಪಕವಾಗಿ ಬಳಸುವಲ್ಲಿ ಸಮಸ್ಯೆಯಾಗುತ್ತಿದೆ.ನಿತ್ಯ ವಿದ್ಯುತ್ ಕಣ್ಣುಮುಚ್ಚಾಲೆಯಿಂದಾಗಿ ನೀರಿನ ಸಮಸ್ಯೆ ಇಲ್ಲದ ಕಡೆಯೂ ಸಮಸ್ಯೆ ಎದರುರಾಗಿದೆ. ಸಮರ್ಪಕ ವಿದ್ಯುತ್ ವ್ಯವಸ್ಥೆ ಇದ್ದರೆ ನೀರಿನ ಪೂರೈಕೆ ಯಾವುದೇ ಸಮಸ್ಯೆ ಎದುರಾಗದು” ಎಂದು “ಸುಳ್ಯಸುದ್ದಿ.ಕಾಂ”  ನೊಂದಿಗೆ ಕೃಷಿಕ ಸುರೇಶ್ಚಂದ್ರ ಹೇಳಿದರು.

“ಇರುವ ವಿದ್ಯುತ್ ಸರಿಯಾಗಿ ನೀಡಿದರೆ ಸಮಸ್ಯೆ ಇಲ್ಲ. ಹಗಲು 4 ಗಂಟೆ ಪಂಪ್‍ಗೆ ವಿದ್ಯುತ್ ಸಿಕ್ಕಿದರೆ ರಾತ್ರಿ ವೇಳೆ 3 ಗಂಟೆ ಅಂದರೂ ಅಷ್ಟು ಸಮಯ ಲಭ್ಯವಾಗುತ್ತಿಲ್ಲ. ಹೀಗಾಗಿ ಮತ್ತಷ್ಟು ಸಮಸ್ಯೆ” ಎಂದು “ಸುಳ್ಯಸುದ್ದಿ.ಕಾಂ” ನೊಂದಿಗೆ ಕೃಷಿಕ ವೆಂಕಪ್ಪ ಗೌಡ ತಮ್ಮ ಅಳಲು ತೋಡಿಕೊಂಡರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

7 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

7 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

7 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

8 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

8 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

9 hours ago