ಸುಬ್ರಹ್ಮಣ್ಯ: ಕೆರೆ,ಬಾವಿ,ಹೊಳೆಯಲ್ಲಿ ನೀರಿಲ್ಲ. ಮಳೆ ಬಂದರೂ ನೀರಿನ ಸೆಲೆ ಕಾಣುತ್ತಿಲ್ಲ. ಪರಿಣಾಮವಾಗಿ ತೋಟಗಳು ಒಣಗುತ್ತಿವೆ. ಕೊಳವೆಬಾವಿಯಲ್ಲಿ ನೀರಿದ್ದರೂ ಕರೆಂಟ್ ಇಲ್ಲ. ಹೀಗಾಗಿ ಈಗ ಗ್ರಾಮೀಣ ಭಾಗದಲ್ಲೂ ಸಮಸ್ಯೆ ಹೆಚ್ಚಾಗಿದೆ.
ಸುಮಾರು 8 ತಿಂಗಳ ಹಿಂದೆ ಭಾರೀ ಮಳೆಯ ಕಾರಣದಿಂದ ಅಡಿಕೆ ಕೊಳೆರೋಗದ ಸುದ್ದಿಯಾದರೆ ಈಗ ಅಡಿಕೆ ಮರಕ್ಕೆ ನೀರಿಲ್ಲದೆ ಒಣಗುವ ಸುದ್ದಿ. ಕಳೆದ ಒಂದು ತಿಂಗಳಿನಿಂದ ನೀರಿನ ಕೊರತೆ ಉಂಟಾಗಿ ಕೃಷಿ ಭೂಮಿ ಒಣಗಿದೆ. ಅದರ ಜೊತೆಗೆ ಕುಡಿಯಲೂ ನೀರಿಲ್ಲ. ಇದ್ದ ಅಲ್ಪ ಸ್ವಲ್ಪ ಫಸಲುಗಳು ಬಿಸಿಲಿನ ಝಳಕ್ಕೆ ಸಿಲುಕಿ ನಾಶವಾಗುತ್ತದೆ. ಹಿಂದೆಲ್ಲಾ ಗ್ರಾಮೀಣ ಭಾಗದಲ್ಲಿ ಅಂದರೆ ಮಲೆನಾಡು ಭಾಗದಲ್ಲಿ ಇಂತಹ ಸಮಸ್ಯೆ ಇರಲಿಲ್ಲ. ಆದರೆ ಇತ್ತೀಚೆಗೆ ಕಾಡಂಚಿನ ಪ್ರದೇಶದಲ್ಲೂ ಬರದ ಸ್ಥಿತಿ ಎದುರಾಗುತ್ತಿದೆ. ಈಗೀಗ ವಿದ್ಯುತ್ ಸಮಸ್ಯೆ ಕೂಡಾ ಕೃಷಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
“ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆಯಿಂದ ನೀರಿನ ಆಸರೆಯಿದ್ದರೂ ಅದನ್ನು ಸಮರ್ಪಕವಾಗಿ ಬಳಸುವಲ್ಲಿ ಸಮಸ್ಯೆಯಾಗುತ್ತಿದೆ.ನಿತ್ಯ ವಿದ್ಯುತ್ ಕಣ್ಣುಮುಚ್ಚಾಲೆಯಿಂದಾಗಿ ನೀರಿನ ಸಮಸ್ಯೆ ಇಲ್ಲದ ಕಡೆಯೂ ಸಮಸ್ಯೆ ಎದರುರಾಗಿದೆ. ಸಮರ್ಪಕ ವಿದ್ಯುತ್ ವ್ಯವಸ್ಥೆ ಇದ್ದರೆ ನೀರಿನ ಪೂರೈಕೆ ಯಾವುದೇ ಸಮಸ್ಯೆ ಎದುರಾಗದು” ಎಂದು “ಸುಳ್ಯಸುದ್ದಿ.ಕಾಂ” ನೊಂದಿಗೆ ಕೃಷಿಕ ಸುರೇಶ್ಚಂದ್ರ ಹೇಳಿದರು.
“ಇರುವ ವಿದ್ಯುತ್ ಸರಿಯಾಗಿ ನೀಡಿದರೆ ಸಮಸ್ಯೆ ಇಲ್ಲ. ಹಗಲು 4 ಗಂಟೆ ಪಂಪ್ಗೆ ವಿದ್ಯುತ್ ಸಿಕ್ಕಿದರೆ ರಾತ್ರಿ ವೇಳೆ 3 ಗಂಟೆ ಅಂದರೂ ಅಷ್ಟು ಸಮಯ ಲಭ್ಯವಾಗುತ್ತಿಲ್ಲ. ಹೀಗಾಗಿ ಮತ್ತಷ್ಟು ಸಮಸ್ಯೆ” ಎಂದು “ಸುಳ್ಯಸುದ್ದಿ.ಕಾಂ” ನೊಂದಿಗೆ ಕೃಷಿಕ ವೆಂಕಪ್ಪ ಗೌಡ ತಮ್ಮ ಅಳಲು ತೋಡಿಕೊಂಡರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…