Advertisement
Categories: Uncategorized

ಬತ್ತಿದ ಜೀವ ಜಲ : ಒಣಗಿದ ತೋಟಗಳು

Share

ಸುಬ್ರಹ್ಮಣ್ಯ: ಕೆರೆ,ಬಾವಿ,ಹೊಳೆಯಲ್ಲಿ ನೀರಿಲ್ಲ. ಮಳೆ ಬಂದರೂ ನೀರಿನ ಸೆಲೆ ಕಾಣುತ್ತಿಲ್ಲ. ಪರಿಣಾಮವಾಗಿ ತೋಟಗಳು ಒಣಗುತ್ತಿವೆ. ಕೊಳವೆಬಾವಿಯಲ್ಲಿ ನೀರಿದ್ದರೂ ಕರೆಂಟ್ ಇಲ್ಲ. ಹೀಗಾಗಿ ಈಗ ಗ್ರಾಮೀಣ ಭಾಗದಲ್ಲೂ ಸಮಸ್ಯೆ ಹೆಚ್ಚಾಗಿದೆ.

ಸುಮಾರು 8 ತಿಂಗಳ ಹಿಂದೆ ಭಾರೀ ಮಳೆಯ ಕಾರಣದಿಂದ ಅಡಿಕೆ ಕೊಳೆರೋಗದ ಸುದ್ದಿಯಾದರೆ ಈಗ ಅಡಿಕೆ ಮರಕ್ಕೆ ನೀರಿಲ್ಲದೆ ಒಣಗುವ ಸುದ್ದಿ. ಕಳೆದ ಒಂದು ತಿಂಗಳಿನಿಂದ ನೀರಿನ ಕೊರತೆ ಉಂಟಾಗಿ ಕೃಷಿ ಭೂಮಿ ಒಣಗಿದೆ. ಅದರ ಜೊತೆಗೆ ಕುಡಿಯಲೂ ನೀರಿಲ್ಲ. ಇದ್ದ ಅಲ್ಪ ಸ್ವಲ್ಪ ಫಸಲುಗಳು ಬಿಸಿಲಿನ ಝಳಕ್ಕೆ ಸಿಲುಕಿ ನಾಶವಾಗುತ್ತದೆ. ಹಿಂದೆಲ್ಲಾ ಗ್ರಾಮೀಣ ಭಾಗದಲ್ಲಿ ಅಂದರೆ ಮಲೆನಾಡು ಭಾಗದಲ್ಲಿ ಇಂತಹ ಸಮಸ್ಯೆ ಇರಲಿಲ್ಲ. ಆದರೆ ಇತ್ತೀಚೆಗೆ ಕಾಡಂಚಿನ ಪ್ರದೇಶದಲ್ಲೂ ಬರದ ಸ್ಥಿತಿ ಎದುರಾಗುತ್ತಿದೆ. ಈಗೀಗ ವಿದ್ಯುತ್ ಸಮಸ್ಯೆ ಕೂಡಾ ಕೃಷಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

“ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆಯಿಂದ ನೀರಿನ ಆಸರೆಯಿದ್ದರೂ ಅದನ್ನು ಸಮರ್ಪಕವಾಗಿ ಬಳಸುವಲ್ಲಿ ಸಮಸ್ಯೆಯಾಗುತ್ತಿದೆ.ನಿತ್ಯ ವಿದ್ಯುತ್ ಕಣ್ಣುಮುಚ್ಚಾಲೆಯಿಂದಾಗಿ ನೀರಿನ ಸಮಸ್ಯೆ ಇಲ್ಲದ ಕಡೆಯೂ ಸಮಸ್ಯೆ ಎದರುರಾಗಿದೆ. ಸಮರ್ಪಕ ವಿದ್ಯುತ್ ವ್ಯವಸ್ಥೆ ಇದ್ದರೆ ನೀರಿನ ಪೂರೈಕೆ ಯಾವುದೇ ಸಮಸ್ಯೆ ಎದುರಾಗದು” ಎಂದು “ಸುಳ್ಯಸುದ್ದಿ.ಕಾಂ”  ನೊಂದಿಗೆ ಕೃಷಿಕ ಸುರೇಶ್ಚಂದ್ರ ಹೇಳಿದರು.

“ಇರುವ ವಿದ್ಯುತ್ ಸರಿಯಾಗಿ ನೀಡಿದರೆ ಸಮಸ್ಯೆ ಇಲ್ಲ. ಹಗಲು 4 ಗಂಟೆ ಪಂಪ್‍ಗೆ ವಿದ್ಯುತ್ ಸಿಕ್ಕಿದರೆ ರಾತ್ರಿ ವೇಳೆ 3 ಗಂಟೆ ಅಂದರೂ ಅಷ್ಟು ಸಮಯ ಲಭ್ಯವಾಗುತ್ತಿಲ್ಲ. ಹೀಗಾಗಿ ಮತ್ತಷ್ಟು ಸಮಸ್ಯೆ” ಎಂದು “ಸುಳ್ಯಸುದ್ದಿ.ಕಾಂ” ನೊಂದಿಗೆ ಕೃಷಿಕ ವೆಂಕಪ್ಪ ಗೌಡ ತಮ್ಮ ಅಳಲು ತೋಡಿಕೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

2 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

3 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

10 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

13 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

19 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago