Advertisement
Categories: Uncategorized

ಬತ್ತಿದ ಜೀವ ಜಲ : ಒಣಗಿದ ತೋಟಗಳು

Share

ಸುಬ್ರಹ್ಮಣ್ಯ: ಕೆರೆ,ಬಾವಿ,ಹೊಳೆಯಲ್ಲಿ ನೀರಿಲ್ಲ. ಮಳೆ ಬಂದರೂ ನೀರಿನ ಸೆಲೆ ಕಾಣುತ್ತಿಲ್ಲ. ಪರಿಣಾಮವಾಗಿ ತೋಟಗಳು ಒಣಗುತ್ತಿವೆ. ಕೊಳವೆಬಾವಿಯಲ್ಲಿ ನೀರಿದ್ದರೂ ಕರೆಂಟ್ ಇಲ್ಲ. ಹೀಗಾಗಿ ಈಗ ಗ್ರಾಮೀಣ ಭಾಗದಲ್ಲೂ ಸಮಸ್ಯೆ ಹೆಚ್ಚಾಗಿದೆ.

ಸುಮಾರು 8 ತಿಂಗಳ ಹಿಂದೆ ಭಾರೀ ಮಳೆಯ ಕಾರಣದಿಂದ ಅಡಿಕೆ ಕೊಳೆರೋಗದ ಸುದ್ದಿಯಾದರೆ ಈಗ ಅಡಿಕೆ ಮರಕ್ಕೆ ನೀರಿಲ್ಲದೆ ಒಣಗುವ ಸುದ್ದಿ. ಕಳೆದ ಒಂದು ತಿಂಗಳಿನಿಂದ ನೀರಿನ ಕೊರತೆ ಉಂಟಾಗಿ ಕೃಷಿ ಭೂಮಿ ಒಣಗಿದೆ. ಅದರ ಜೊತೆಗೆ ಕುಡಿಯಲೂ ನೀರಿಲ್ಲ. ಇದ್ದ ಅಲ್ಪ ಸ್ವಲ್ಪ ಫಸಲುಗಳು ಬಿಸಿಲಿನ ಝಳಕ್ಕೆ ಸಿಲುಕಿ ನಾಶವಾಗುತ್ತದೆ. ಹಿಂದೆಲ್ಲಾ ಗ್ರಾಮೀಣ ಭಾಗದಲ್ಲಿ ಅಂದರೆ ಮಲೆನಾಡು ಭಾಗದಲ್ಲಿ ಇಂತಹ ಸಮಸ್ಯೆ ಇರಲಿಲ್ಲ. ಆದರೆ ಇತ್ತೀಚೆಗೆ ಕಾಡಂಚಿನ ಪ್ರದೇಶದಲ್ಲೂ ಬರದ ಸ್ಥಿತಿ ಎದುರಾಗುತ್ತಿದೆ. ಈಗೀಗ ವಿದ್ಯುತ್ ಸಮಸ್ಯೆ ಕೂಡಾ ಕೃಷಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

“ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆಯಿಂದ ನೀರಿನ ಆಸರೆಯಿದ್ದರೂ ಅದನ್ನು ಸಮರ್ಪಕವಾಗಿ ಬಳಸುವಲ್ಲಿ ಸಮಸ್ಯೆಯಾಗುತ್ತಿದೆ.ನಿತ್ಯ ವಿದ್ಯುತ್ ಕಣ್ಣುಮುಚ್ಚಾಲೆಯಿಂದಾಗಿ ನೀರಿನ ಸಮಸ್ಯೆ ಇಲ್ಲದ ಕಡೆಯೂ ಸಮಸ್ಯೆ ಎದರುರಾಗಿದೆ. ಸಮರ್ಪಕ ವಿದ್ಯುತ್ ವ್ಯವಸ್ಥೆ ಇದ್ದರೆ ನೀರಿನ ಪೂರೈಕೆ ಯಾವುದೇ ಸಮಸ್ಯೆ ಎದುರಾಗದು” ಎಂದು “ಸುಳ್ಯಸುದ್ದಿ.ಕಾಂ”  ನೊಂದಿಗೆ ಕೃಷಿಕ ಸುರೇಶ್ಚಂದ್ರ ಹೇಳಿದರು.

“ಇರುವ ವಿದ್ಯುತ್ ಸರಿಯಾಗಿ ನೀಡಿದರೆ ಸಮಸ್ಯೆ ಇಲ್ಲ. ಹಗಲು 4 ಗಂಟೆ ಪಂಪ್‍ಗೆ ವಿದ್ಯುತ್ ಸಿಕ್ಕಿದರೆ ರಾತ್ರಿ ವೇಳೆ 3 ಗಂಟೆ ಅಂದರೂ ಅಷ್ಟು ಸಮಯ ಲಭ್ಯವಾಗುತ್ತಿಲ್ಲ. ಹೀಗಾಗಿ ಮತ್ತಷ್ಟು ಸಮಸ್ಯೆ” ಎಂದು “ಸುಳ್ಯಸುದ್ದಿ.ಕಾಂ” ನೊಂದಿಗೆ ಕೃಷಿಕ ವೆಂಕಪ್ಪ ಗೌಡ ತಮ್ಮ ಅಳಲು ತೋಡಿಕೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

3 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

12 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

13 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

19 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

20 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

22 hours ago