Advertisement
ಸುದ್ದಿಗಳು

ಬದಲಾಗುತ್ತಿರುವ ಕೊರೋನಾ ವೈರಸ್‌ ನ ರೋಗಲಕ್ಷಣಗಳು | 11 ಹೊಸ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವಾಲಯ

Share

ನವದೆಹಲಿ: ಕೊರೋನಾ ವೈರಸ್‌ ಪ್ರಪಂಚದಾದ್ಯಂತ ಬಹುದೊಡ್ಡ ತಲೆನೋವಿನ ಸಂಗತಿಯಾಗಿದೆ. ಕೇವಲ 4  ಲಕ್ಷಣಗಳ ಮೂಲಕ ಬೆಳಕಿಗೆ ಬಂದ ಕೊರೋನಾ ವೈರಸ್‌ ಇದೀಗ  11 ಲಕ್ಷಣಗಳನ್ನು ಹೊಂದಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Advertisement
Advertisement
ಪ್ರಪಂಚದಾದ್ಯಂತ ಕೊರೋನಾ ವೈರಸ್‌ ವ್ಯಾಪಕವಾಗಿದೆ. ಇದರ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಲೇ ಇದೆ. ಲಸಿಕೆಗಳ ಪ್ರಯೋಗವೂ ನಡೆಯುತ್ತಿದೆ. ಚೀನಾದ ವುಹಾನ್ ನಲ್ಲಿ  ಕಂಡುಬಂದ ಕೊರೋನಾ ವೈರಸ್‌ ಮಾನದ ದೇಹಕ್ಕೆ ಅಂಟಿದ ಬಳಿಕ ಆರಂಭದಲ್ಲಿ 4 ಲಕ್ಷಣಗಳು ಕಂಡುಬಂದಿತ್ತು. ಬಳಿಕ ಪ್ರಪಂಚದಾದ್ಯಂತ ಹರಡಿದ ಕೊರೋನಾ ವೈರಸ್‌ ತನ್ನ ರುದ್ರ ರೂಪವನ್ನು  ತೋರಿಸಿದೆ. ಇದೀಗ  ರೋಗ ಲಕ್ಷಣಗಳು 4 ಮಾತ್ರವಲ್ಲ ಒಟ್ಟು 11 ಲಕ್ಷಣಗಳನ್ನೂ ಗಮನಿಸಬೇಕಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗ  ಲಕ್ಷಣಗಳು ನಿರಂತರವಾಗಿ ಬದಲಾಗುತ್ತಿವೆ. ಹೊಸ ಲಕ್ಷಣಗಳು ಕಂಡುಬರುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು  ಮಾಹಿತಿ ನೀಡಿದೆ.
ಕೊರೋನಾ ವೈರಸ್‌ ಹರಡಿದ ಆರಂಭದಲ್ಲಿ 4 ರೋಗ ಲಕ್ಷಣಗಳು ಪ್ರಮುಖವಾಗಿದ್ದವು  ವಿಪರೀತ ಜ್ವರ , ಒಣ ಕೆಮ್ಮು, ಗಂಟಲು ಕೆರತ ಹಾಗೂ  ಉಸಿರಾಟದಲ್ಲಿ ತೊಂದರೆ.
ಆದರೆ ಇದೀಗ  ಕೊರೋನಾದಿಂದ ಬಳಲುತ್ತಿರುವ ರೋಗಿಗಳ ಪರಿಶೀಲನೆ ಬಳಿಕ ವಿಪರೀತ ಜ್ವರ , ಒಣ ಕೆಮ್ಮು, ಗಂಟಲು ಕೆರತ ಹಾಗೂ  ಉಸಿರಾಟದಲ್ಲಿ ತೊಂದರೆ ರೋಗ ಲಕ್ಷಣಗಳ ಜೊತೆಗೆ  ತೀವ್ರ ದೇಹದ ನೋವು,  ನಿರಂತರ ತಲೆನೋವು,  ತುಂಬಾ ಶೀತದಿಂದ ನಡುಗುತ್ತದೆ, – ವಾಕರಿಕೆ,  ವಾಂತಿ,  ಹೊಟ್ಟೆಯಲ್ಲಿ ಸಂಕಟ, ಅತಿಸಾರ,  ಕೆಮ್ಮುವ ಸಮಯದಲ್ಲಿ ಲೋಳೆಯ ರಕ್ತಸ್ರಾವ ಇತ್ಯಾದಿಗಳೂ ಕಂಡುಬಂದಿವೆ.
ಇದಕ್ಕೂ ಮುನ್ನ ವಿಶ್ವ ಆರೋಗ್ಯ ಸಂಸ್ಥೆಯು ಕೊರೋನಾ ರೋಗ ಲಕ್ಷಣದಲ್ಲಿ ವಾಸನೆ ತಿಳಿಯದಿರುವುದು ಮತ್ತು ರುಚಿ ಗೊತ್ತಾಗದಿರುವುದೂ ಸಹ  ಪ್ರಮುಖ ಲಕ್ಷಣಗಳಲ್ಲಿ ಒಂದಾಗಿದೆ ಎಂದು ಹೇಳಿತ್ತು.
ಮುಂಜಾಗ್ರತೆ ಏನು ? :ಕೊರೋನಾ ವೈರಸ್‌ ನಿಂದ ಪಾರಾಗಲು ಆರೋಗ್ಯ ಸಚಿವಾಲಯವು ಸದಾ ಎಚ್ಚರಿಕೆಯನ್ನು  ನೀಡುತ್ತಿದೆ. ಪ್ರಮುಖವಾಗಿ ಸಾಮಾಜಿಕ ಅಂತರ ಕಾಪಾಡುವುದು ,  ಸಾರ್ವಜನಿಕ ಸ್ಥಳದಲ್ಲಿ ಕನಿಷ್ಠ 6 ಅಡಿ ದೂರವಿರುವುದು, ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇ ಪದೇ ಕೈಗಳಿಂದ ಮುಟ್ಟದಿರುವುದು, ಆಗಾಗ್ಗೆ ಸೋಪಿನಿಂದ ಕೈ ತೊಳೆಯುವುದು,  ಯಾವುದೇ ಸ್ಥಳವನ್ನು ಮುಟ್ಟುವ ಮೊದಲು ಅದನ್ನು ಸ್ವಚ್ಛಗೊಳಿಸುವುದು,  ಅಗತ್ಯವಿದ್ದಾಗ ಮಾತ್ರ ಪ್ರವಾಸ ಮಾಡುವುದು, ಜನಸಂದಣಿ ಇರುವ ಸ್ಥಳಕ್ಕೆ ಹೋಗದಿರುವುದು, ಸಾರ್ವಜನಿಕ ಸ್ಥಳದಲ್ಲಿ ಉಗುಳದಿರುವುದು ಹೀಗೇ ವಿವಿಧ ಮಾಹಿತಿಯನ್ನು ಸಚಿವಾಲಯ ನೀಡುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏನಾಗುತ್ತದೆ…? | ಯಾರಿಗಾದರೂ ಮಾಹಿತಿ ಇದೆಯೇ..? |

ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..‌".…

5 hours ago

ಹವಾಮಾನ ವರದಿ | 25-09-2024 | ಸೆ. 28ರಿಂದ ಮಳೆ ಕಡಿಮೆ | ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರಿಕೆ |

26.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

6 hours ago

ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ | ಕೆ.ಜಿ.ಗೆ 35 ರೂಪಾಯಿಯಂತೆ ಈರುಳ್ಳಿ ಮಾರಾಟ

ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF…

21 hours ago

ಎಐ ಸುರಕ್ಷತಾ ಪ್ರಮಾಣೀಕರಣ ಕಾರ್ಯಕ್ರಮ

ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ…

21 hours ago

ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ  ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370…

21 hours ago