Advertisement
ಸುದ್ದಿಗಳು

ಬದಲಾಗುತ್ತಿರುವ ಕೊರೋನಾ ವೈರಸ್‌ ನ ರೋಗಲಕ್ಷಣಗಳು | 11 ಹೊಸ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವಾಲಯ

Share

ನವದೆಹಲಿ: ಕೊರೋನಾ ವೈರಸ್‌ ಪ್ರಪಂಚದಾದ್ಯಂತ ಬಹುದೊಡ್ಡ ತಲೆನೋವಿನ ಸಂಗತಿಯಾಗಿದೆ. ಕೇವಲ 4  ಲಕ್ಷಣಗಳ ಮೂಲಕ ಬೆಳಕಿಗೆ ಬಂದ ಕೊರೋನಾ ವೈರಸ್‌ ಇದೀಗ  11 ಲಕ್ಷಣಗಳನ್ನು ಹೊಂದಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಪ್ರಪಂಚದಾದ್ಯಂತ ಕೊರೋನಾ ವೈರಸ್‌ ವ್ಯಾಪಕವಾಗಿದೆ. ಇದರ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಲೇ ಇದೆ. ಲಸಿಕೆಗಳ ಪ್ರಯೋಗವೂ ನಡೆಯುತ್ತಿದೆ. ಚೀನಾದ ವುಹಾನ್ ನಲ್ಲಿ  ಕಂಡುಬಂದ ಕೊರೋನಾ ವೈರಸ್‌ ಮಾನದ ದೇಹಕ್ಕೆ ಅಂಟಿದ ಬಳಿಕ ಆರಂಭದಲ್ಲಿ 4 ಲಕ್ಷಣಗಳು ಕಂಡುಬಂದಿತ್ತು. ಬಳಿಕ ಪ್ರಪಂಚದಾದ್ಯಂತ ಹರಡಿದ ಕೊರೋನಾ ವೈರಸ್‌ ತನ್ನ ರುದ್ರ ರೂಪವನ್ನು  ತೋರಿಸಿದೆ. ಇದೀಗ  ರೋಗ ಲಕ್ಷಣಗಳು 4 ಮಾತ್ರವಲ್ಲ ಒಟ್ಟು 11 ಲಕ್ಷಣಗಳನ್ನೂ ಗಮನಿಸಬೇಕಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗ  ಲಕ್ಷಣಗಳು ನಿರಂತರವಾಗಿ ಬದಲಾಗುತ್ತಿವೆ. ಹೊಸ ಲಕ್ಷಣಗಳು ಕಂಡುಬರುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು  ಮಾಹಿತಿ ನೀಡಿದೆ.
ಕೊರೋನಾ ವೈರಸ್‌ ಹರಡಿದ ಆರಂಭದಲ್ಲಿ 4 ರೋಗ ಲಕ್ಷಣಗಳು ಪ್ರಮುಖವಾಗಿದ್ದವು  ವಿಪರೀತ ಜ್ವರ , ಒಣ ಕೆಮ್ಮು, ಗಂಟಲು ಕೆರತ ಹಾಗೂ  ಉಸಿರಾಟದಲ್ಲಿ ತೊಂದರೆ.
ಆದರೆ ಇದೀಗ  ಕೊರೋನಾದಿಂದ ಬಳಲುತ್ತಿರುವ ರೋಗಿಗಳ ಪರಿಶೀಲನೆ ಬಳಿಕ ವಿಪರೀತ ಜ್ವರ , ಒಣ ಕೆಮ್ಮು, ಗಂಟಲು ಕೆರತ ಹಾಗೂ  ಉಸಿರಾಟದಲ್ಲಿ ತೊಂದರೆ ರೋಗ ಲಕ್ಷಣಗಳ ಜೊತೆಗೆ  ತೀವ್ರ ದೇಹದ ನೋವು,  ನಿರಂತರ ತಲೆನೋವು,  ತುಂಬಾ ಶೀತದಿಂದ ನಡುಗುತ್ತದೆ, – ವಾಕರಿಕೆ,  ವಾಂತಿ,  ಹೊಟ್ಟೆಯಲ್ಲಿ ಸಂಕಟ, ಅತಿಸಾರ,  ಕೆಮ್ಮುವ ಸಮಯದಲ್ಲಿ ಲೋಳೆಯ ರಕ್ತಸ್ರಾವ ಇತ್ಯಾದಿಗಳೂ ಕಂಡುಬಂದಿವೆ.
ಇದಕ್ಕೂ ಮುನ್ನ ವಿಶ್ವ ಆರೋಗ್ಯ ಸಂಸ್ಥೆಯು ಕೊರೋನಾ ರೋಗ ಲಕ್ಷಣದಲ್ಲಿ ವಾಸನೆ ತಿಳಿಯದಿರುವುದು ಮತ್ತು ರುಚಿ ಗೊತ್ತಾಗದಿರುವುದೂ ಸಹ  ಪ್ರಮುಖ ಲಕ್ಷಣಗಳಲ್ಲಿ ಒಂದಾಗಿದೆ ಎಂದು ಹೇಳಿತ್ತು.
ಮುಂಜಾಗ್ರತೆ ಏನು ? :ಕೊರೋನಾ ವೈರಸ್‌ ನಿಂದ ಪಾರಾಗಲು ಆರೋಗ್ಯ ಸಚಿವಾಲಯವು ಸದಾ ಎಚ್ಚರಿಕೆಯನ್ನು  ನೀಡುತ್ತಿದೆ. ಪ್ರಮುಖವಾಗಿ ಸಾಮಾಜಿಕ ಅಂತರ ಕಾಪಾಡುವುದು ,  ಸಾರ್ವಜನಿಕ ಸ್ಥಳದಲ್ಲಿ ಕನಿಷ್ಠ 6 ಅಡಿ ದೂರವಿರುವುದು, ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇ ಪದೇ ಕೈಗಳಿಂದ ಮುಟ್ಟದಿರುವುದು, ಆಗಾಗ್ಗೆ ಸೋಪಿನಿಂದ ಕೈ ತೊಳೆಯುವುದು,  ಯಾವುದೇ ಸ್ಥಳವನ್ನು ಮುಟ್ಟುವ ಮೊದಲು ಅದನ್ನು ಸ್ವಚ್ಛಗೊಳಿಸುವುದು,  ಅಗತ್ಯವಿದ್ದಾಗ ಮಾತ್ರ ಪ್ರವಾಸ ಮಾಡುವುದು, ಜನಸಂದಣಿ ಇರುವ ಸ್ಥಳಕ್ಕೆ ಹೋಗದಿರುವುದು, ಸಾರ್ವಜನಿಕ ಸ್ಥಳದಲ್ಲಿ ಉಗುಳದಿರುವುದು ಹೀಗೇ ವಿವಿಧ ಮಾಹಿತಿಯನ್ನು ಸಚಿವಾಲಯ ನೀಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 hour ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

19 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

1 day ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago