Advertisement
ಸುದ್ದಿಗಳು

ಬದಲಾಗುತ್ತಿರುವ ಕೊರೋನಾ ವೈರಸ್‌ ನ ರೋಗಲಕ್ಷಣಗಳು | 11 ಹೊಸ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವಾಲಯ

Share

ನವದೆಹಲಿ: ಕೊರೋನಾ ವೈರಸ್‌ ಪ್ರಪಂಚದಾದ್ಯಂತ ಬಹುದೊಡ್ಡ ತಲೆನೋವಿನ ಸಂಗತಿಯಾಗಿದೆ. ಕೇವಲ 4  ಲಕ್ಷಣಗಳ ಮೂಲಕ ಬೆಳಕಿಗೆ ಬಂದ ಕೊರೋನಾ ವೈರಸ್‌ ಇದೀಗ  11 ಲಕ್ಷಣಗಳನ್ನು ಹೊಂದಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಪ್ರಪಂಚದಾದ್ಯಂತ ಕೊರೋನಾ ವೈರಸ್‌ ವ್ಯಾಪಕವಾಗಿದೆ. ಇದರ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಲೇ ಇದೆ. ಲಸಿಕೆಗಳ ಪ್ರಯೋಗವೂ ನಡೆಯುತ್ತಿದೆ. ಚೀನಾದ ವುಹಾನ್ ನಲ್ಲಿ  ಕಂಡುಬಂದ ಕೊರೋನಾ ವೈರಸ್‌ ಮಾನದ ದೇಹಕ್ಕೆ ಅಂಟಿದ ಬಳಿಕ ಆರಂಭದಲ್ಲಿ 4 ಲಕ್ಷಣಗಳು ಕಂಡುಬಂದಿತ್ತು. ಬಳಿಕ ಪ್ರಪಂಚದಾದ್ಯಂತ ಹರಡಿದ ಕೊರೋನಾ ವೈರಸ್‌ ತನ್ನ ರುದ್ರ ರೂಪವನ್ನು  ತೋರಿಸಿದೆ. ಇದೀಗ  ರೋಗ ಲಕ್ಷಣಗಳು 4 ಮಾತ್ರವಲ್ಲ ಒಟ್ಟು 11 ಲಕ್ಷಣಗಳನ್ನೂ ಗಮನಿಸಬೇಕಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗ  ಲಕ್ಷಣಗಳು ನಿರಂತರವಾಗಿ ಬದಲಾಗುತ್ತಿವೆ. ಹೊಸ ಲಕ್ಷಣಗಳು ಕಂಡುಬರುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು  ಮಾಹಿತಿ ನೀಡಿದೆ.
ಕೊರೋನಾ ವೈರಸ್‌ ಹರಡಿದ ಆರಂಭದಲ್ಲಿ 4 ರೋಗ ಲಕ್ಷಣಗಳು ಪ್ರಮುಖವಾಗಿದ್ದವು  ವಿಪರೀತ ಜ್ವರ , ಒಣ ಕೆಮ್ಮು, ಗಂಟಲು ಕೆರತ ಹಾಗೂ  ಉಸಿರಾಟದಲ್ಲಿ ತೊಂದರೆ.
ಆದರೆ ಇದೀಗ  ಕೊರೋನಾದಿಂದ ಬಳಲುತ್ತಿರುವ ರೋಗಿಗಳ ಪರಿಶೀಲನೆ ಬಳಿಕ ವಿಪರೀತ ಜ್ವರ , ಒಣ ಕೆಮ್ಮು, ಗಂಟಲು ಕೆರತ ಹಾಗೂ  ಉಸಿರಾಟದಲ್ಲಿ ತೊಂದರೆ ರೋಗ ಲಕ್ಷಣಗಳ ಜೊತೆಗೆ  ತೀವ್ರ ದೇಹದ ನೋವು,  ನಿರಂತರ ತಲೆನೋವು,  ತುಂಬಾ ಶೀತದಿಂದ ನಡುಗುತ್ತದೆ, – ವಾಕರಿಕೆ,  ವಾಂತಿ,  ಹೊಟ್ಟೆಯಲ್ಲಿ ಸಂಕಟ, ಅತಿಸಾರ,  ಕೆಮ್ಮುವ ಸಮಯದಲ್ಲಿ ಲೋಳೆಯ ರಕ್ತಸ್ರಾವ ಇತ್ಯಾದಿಗಳೂ ಕಂಡುಬಂದಿವೆ.
ಇದಕ್ಕೂ ಮುನ್ನ ವಿಶ್ವ ಆರೋಗ್ಯ ಸಂಸ್ಥೆಯು ಕೊರೋನಾ ರೋಗ ಲಕ್ಷಣದಲ್ಲಿ ವಾಸನೆ ತಿಳಿಯದಿರುವುದು ಮತ್ತು ರುಚಿ ಗೊತ್ತಾಗದಿರುವುದೂ ಸಹ  ಪ್ರಮುಖ ಲಕ್ಷಣಗಳಲ್ಲಿ ಒಂದಾಗಿದೆ ಎಂದು ಹೇಳಿತ್ತು.
ಮುಂಜಾಗ್ರತೆ ಏನು ? :ಕೊರೋನಾ ವೈರಸ್‌ ನಿಂದ ಪಾರಾಗಲು ಆರೋಗ್ಯ ಸಚಿವಾಲಯವು ಸದಾ ಎಚ್ಚರಿಕೆಯನ್ನು  ನೀಡುತ್ತಿದೆ. ಪ್ರಮುಖವಾಗಿ ಸಾಮಾಜಿಕ ಅಂತರ ಕಾಪಾಡುವುದು ,  ಸಾರ್ವಜನಿಕ ಸ್ಥಳದಲ್ಲಿ ಕನಿಷ್ಠ 6 ಅಡಿ ದೂರವಿರುವುದು, ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇ ಪದೇ ಕೈಗಳಿಂದ ಮುಟ್ಟದಿರುವುದು, ಆಗಾಗ್ಗೆ ಸೋಪಿನಿಂದ ಕೈ ತೊಳೆಯುವುದು,  ಯಾವುದೇ ಸ್ಥಳವನ್ನು ಮುಟ್ಟುವ ಮೊದಲು ಅದನ್ನು ಸ್ವಚ್ಛಗೊಳಿಸುವುದು,  ಅಗತ್ಯವಿದ್ದಾಗ ಮಾತ್ರ ಪ್ರವಾಸ ಮಾಡುವುದು, ಜನಸಂದಣಿ ಇರುವ ಸ್ಥಳಕ್ಕೆ ಹೋಗದಿರುವುದು, ಸಾರ್ವಜನಿಕ ಸ್ಥಳದಲ್ಲಿ ಉಗುಳದಿರುವುದು ಹೀಗೇ ವಿವಿಧ ಮಾಹಿತಿಯನ್ನು ಸಚಿವಾಲಯ ನೀಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

9 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

16 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago