Advertisement
ಸುದ್ದಿಗಳು

ಬದಲಾಗುತ್ತಿರುವ ಕೊರೋನಾ ವೈರಸ್‌ ನ ರೋಗಲಕ್ಷಣಗಳು | 11 ಹೊಸ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವಾಲಯ

Share

ನವದೆಹಲಿ: ಕೊರೋನಾ ವೈರಸ್‌ ಪ್ರಪಂಚದಾದ್ಯಂತ ಬಹುದೊಡ್ಡ ತಲೆನೋವಿನ ಸಂಗತಿಯಾಗಿದೆ. ಕೇವಲ 4  ಲಕ್ಷಣಗಳ ಮೂಲಕ ಬೆಳಕಿಗೆ ಬಂದ ಕೊರೋನಾ ವೈರಸ್‌ ಇದೀಗ  11 ಲಕ್ಷಣಗಳನ್ನು ಹೊಂದಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಪ್ರಪಂಚದಾದ್ಯಂತ ಕೊರೋನಾ ವೈರಸ್‌ ವ್ಯಾಪಕವಾಗಿದೆ. ಇದರ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಲೇ ಇದೆ. ಲಸಿಕೆಗಳ ಪ್ರಯೋಗವೂ ನಡೆಯುತ್ತಿದೆ. ಚೀನಾದ ವುಹಾನ್ ನಲ್ಲಿ  ಕಂಡುಬಂದ ಕೊರೋನಾ ವೈರಸ್‌ ಮಾನದ ದೇಹಕ್ಕೆ ಅಂಟಿದ ಬಳಿಕ ಆರಂಭದಲ್ಲಿ 4 ಲಕ್ಷಣಗಳು ಕಂಡುಬಂದಿತ್ತು. ಬಳಿಕ ಪ್ರಪಂಚದಾದ್ಯಂತ ಹರಡಿದ ಕೊರೋನಾ ವೈರಸ್‌ ತನ್ನ ರುದ್ರ ರೂಪವನ್ನು  ತೋರಿಸಿದೆ. ಇದೀಗ  ರೋಗ ಲಕ್ಷಣಗಳು 4 ಮಾತ್ರವಲ್ಲ ಒಟ್ಟು 11 ಲಕ್ಷಣಗಳನ್ನೂ ಗಮನಿಸಬೇಕಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗ  ಲಕ್ಷಣಗಳು ನಿರಂತರವಾಗಿ ಬದಲಾಗುತ್ತಿವೆ. ಹೊಸ ಲಕ್ಷಣಗಳು ಕಂಡುಬರುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು  ಮಾಹಿತಿ ನೀಡಿದೆ.
ಕೊರೋನಾ ವೈರಸ್‌ ಹರಡಿದ ಆರಂಭದಲ್ಲಿ 4 ರೋಗ ಲಕ್ಷಣಗಳು ಪ್ರಮುಖವಾಗಿದ್ದವು  ವಿಪರೀತ ಜ್ವರ , ಒಣ ಕೆಮ್ಮು, ಗಂಟಲು ಕೆರತ ಹಾಗೂ  ಉಸಿರಾಟದಲ್ಲಿ ತೊಂದರೆ.
ಆದರೆ ಇದೀಗ  ಕೊರೋನಾದಿಂದ ಬಳಲುತ್ತಿರುವ ರೋಗಿಗಳ ಪರಿಶೀಲನೆ ಬಳಿಕ ವಿಪರೀತ ಜ್ವರ , ಒಣ ಕೆಮ್ಮು, ಗಂಟಲು ಕೆರತ ಹಾಗೂ  ಉಸಿರಾಟದಲ್ಲಿ ತೊಂದರೆ ರೋಗ ಲಕ್ಷಣಗಳ ಜೊತೆಗೆ  ತೀವ್ರ ದೇಹದ ನೋವು,  ನಿರಂತರ ತಲೆನೋವು,  ತುಂಬಾ ಶೀತದಿಂದ ನಡುಗುತ್ತದೆ, – ವಾಕರಿಕೆ,  ವಾಂತಿ,  ಹೊಟ್ಟೆಯಲ್ಲಿ ಸಂಕಟ, ಅತಿಸಾರ,  ಕೆಮ್ಮುವ ಸಮಯದಲ್ಲಿ ಲೋಳೆಯ ರಕ್ತಸ್ರಾವ ಇತ್ಯಾದಿಗಳೂ ಕಂಡುಬಂದಿವೆ.
ಇದಕ್ಕೂ ಮುನ್ನ ವಿಶ್ವ ಆರೋಗ್ಯ ಸಂಸ್ಥೆಯು ಕೊರೋನಾ ರೋಗ ಲಕ್ಷಣದಲ್ಲಿ ವಾಸನೆ ತಿಳಿಯದಿರುವುದು ಮತ್ತು ರುಚಿ ಗೊತ್ತಾಗದಿರುವುದೂ ಸಹ  ಪ್ರಮುಖ ಲಕ್ಷಣಗಳಲ್ಲಿ ಒಂದಾಗಿದೆ ಎಂದು ಹೇಳಿತ್ತು.
ಮುಂಜಾಗ್ರತೆ ಏನು ? :ಕೊರೋನಾ ವೈರಸ್‌ ನಿಂದ ಪಾರಾಗಲು ಆರೋಗ್ಯ ಸಚಿವಾಲಯವು ಸದಾ ಎಚ್ಚರಿಕೆಯನ್ನು  ನೀಡುತ್ತಿದೆ. ಪ್ರಮುಖವಾಗಿ ಸಾಮಾಜಿಕ ಅಂತರ ಕಾಪಾಡುವುದು ,  ಸಾರ್ವಜನಿಕ ಸ್ಥಳದಲ್ಲಿ ಕನಿಷ್ಠ 6 ಅಡಿ ದೂರವಿರುವುದು, ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇ ಪದೇ ಕೈಗಳಿಂದ ಮುಟ್ಟದಿರುವುದು, ಆಗಾಗ್ಗೆ ಸೋಪಿನಿಂದ ಕೈ ತೊಳೆಯುವುದು,  ಯಾವುದೇ ಸ್ಥಳವನ್ನು ಮುಟ್ಟುವ ಮೊದಲು ಅದನ್ನು ಸ್ವಚ್ಛಗೊಳಿಸುವುದು,  ಅಗತ್ಯವಿದ್ದಾಗ ಮಾತ್ರ ಪ್ರವಾಸ ಮಾಡುವುದು, ಜನಸಂದಣಿ ಇರುವ ಸ್ಥಳಕ್ಕೆ ಹೋಗದಿರುವುದು, ಸಾರ್ವಜನಿಕ ಸ್ಥಳದಲ್ಲಿ ಉಗುಳದಿರುವುದು ಹೀಗೇ ವಿವಿಧ ಮಾಹಿತಿಯನ್ನು ಸಚಿವಾಲಯ ನೀಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

39 minutes ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

46 minutes ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

1 hour ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

1 hour ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

18 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago