Advertisement
ಸುದ್ದಿಗಳು

ಬದುಕಿನಂತೆ ಸಾಹಿತ್ಯವೂ ವಿಸ್ತಾರವಾಗಿದೆ: ನಾ. ಮೊಗಸಾಲೆ

Share

ಪುತ್ತೂರು: ಸಾಹಿತ್ಯದಿಂದ ಅಸಹನೆ ದೂರವಾಗುತ್ತದೆ. ಸಾಹಿತಿಗಳು ಅಸಹನೆ ದೂರಮಾಡುವಲ್ಲಿ ಸಾಹಿತ್ಯದ ಕೊಡುಗೆ ನೀಡುತ್ತಿದ್ದಾರೆ. ವಿನಯ, ಔದಾರ್ಯವನ್ನು ಜನರ ಮನದಲ್ಲಿ ತುಂಬುವ ಕಾರ್ಯವನ್ನು ಸಾಹಿತ್ಯವು ಮಾಡುತ್ತದೆ. ಸಾಹಿತ್ಯ ಬರಡಾಗಿದೆ ಎಂಬುದು ಅಸತ್ಯ. ಇಂದು ಯುವಪೀಳಿಗೆಯು ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳುವ ಕಾಳಜಿಯನ್ನು ಹೊಂದಿದ್ದಾರೆ. ಬದುಕಿನಂತೆ ಸಾಹಿತ್ಯವೂ ವಿಸ್ತಾರವಾದುದು ಎಂದು ಸಾಹಿತಿ ನಾ. ಮೊಗಸಾಲೆ ಅಭಿಪ್ರಾಯಪಟ್ಟರು.

ಅವರು ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ಸಂಘ, ಐಕ್ಯುಎಸಿ ಘಟಕ ಮತ್ತು ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಸಹಯೋಗದೊಂದಿಗೆ ನಡೆದ ‘ಮೊಗಸಾಲೆ ಸಾಹಿತ್ಯ ವಿಹಾರ ಸರಣಿ’ ಕಾರ್ಯಕ್ರಮ ಮತ್ತು ಸಾಹಿತ್ಯಗೋಷ್ಠಿಯಲ್ಲಿ ಅತಿಥಿಯಾಗಿ  ಮಾತನಾಡಿದರು.ಸಾಹಿತ್ಯ ಬಗೆಗಿನ ಪ್ರೀತಿ ಹಾಗೂ ಅಧ್ಯಯನವು ಸಾಹಿತ್ಯದ ಬೆಳವಣಿಗೆಗೆ ಸಹಾಯಕವಾಗುತ್ತದೆ. ಸಾಹಿತ್ಯದ ಕುರಿತಾದ ವಿಚಾರಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಸಾಹಿತ್ಯವು ಜನರ ಮನದಲ್ಲಿ ಸಂವೇದನೆಯನ್ನು ಚಿಗುರಿಸುತ್ತದೆ. ಸಾಹಿತ್ಯದಲ್ಲಿ ಸ್ವಂತಿಕೆ ಹಾಗೂ ಬದ್ಧತೆಯನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ. ಜಯರಾಮ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ನಾ. ಮೊಗಸಾಲೆಯವರು ಕಾಂತಾವರ ಎಂಬ ಚಿಕ್ಕ ಹಳ್ಳಿಯಲ್ಲಿ ಸಾಹಿತ್ಯ ಕೃಷಿಯನ್ನು ಆರಂಭಿಸಿದವರು. ವೈದ್ಯನಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ಸಾಧಕರನ್ನು ಪರಿಚಯಿಸುವಲ್ಲಿ ನಾ. ಮೊಗಸಾಲೆಯವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಕಾಂತಾವರ ಎಂಬ ಪುಟ್ಟ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳನ್ನು ಆಯೋಜಿಸಿ ಕಾಂತಾವರವನ್ನು ಮುಖ್ಯಭೂಮಿಕೆಗೆ ತಂದಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಕಾಸರಗೋಡಿನ ಸ್ನಾತಕೋತ್ತರ ಕೇಂದ್ರದ ರವಿಶಂಕರ್ ಜಿ.ಕೆ., ಮೊಗಸಾಲೆಯವರ ಕಾದಂಬರಿಗಳನ್ನು ವಿಮರ್ಶಿಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕನ್ನಡ ಉಪನ್ಯಾಸಕ ವಿಶ್ವನಾಥ ನೇರಳಕಟ್ಟೆ ನಾ. ಮೊಗಸಾಲೆ ಅವರ ಸಣ್ಣಕಥೆಗಳ ಬಗ್ಗೆ ವಿಮರ್ಶಿಸಿದರು.

ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಹೆಚ್.ಜಿ. ಶ್ರೀಧರ್ ಪ್ರಸ್ತಾವನೆಗೈದರು. ವಿದ್ಯಾರ್ಥಿಗಳಾದ ದಿವ್ಯಶ್ರೀ, ಸ್ವಾತಿ ಪ್ರಾರ್ಥಿಸಿದರು. ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಬಿ. ಜನಾರ್ದನ ಭಟ್ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ಸದಾನಂದ ನಾರಾವಿ ವಂದಿಸಿದರು. ವಿದ್ಯಾರ್ಥಿ ರಾಮಕಿಶನ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

2 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

9 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

11 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

18 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

20 hours ago