Advertisement
ಸುದ್ದಿಗಳು

ಬದುಕಿನಂತೆ ಸಾಹಿತ್ಯವೂ ವಿಸ್ತಾರವಾಗಿದೆ: ನಾ. ಮೊಗಸಾಲೆ

Share

ಪುತ್ತೂರು: ಸಾಹಿತ್ಯದಿಂದ ಅಸಹನೆ ದೂರವಾಗುತ್ತದೆ. ಸಾಹಿತಿಗಳು ಅಸಹನೆ ದೂರಮಾಡುವಲ್ಲಿ ಸಾಹಿತ್ಯದ ಕೊಡುಗೆ ನೀಡುತ್ತಿದ್ದಾರೆ. ವಿನಯ, ಔದಾರ್ಯವನ್ನು ಜನರ ಮನದಲ್ಲಿ ತುಂಬುವ ಕಾರ್ಯವನ್ನು ಸಾಹಿತ್ಯವು ಮಾಡುತ್ತದೆ. ಸಾಹಿತ್ಯ ಬರಡಾಗಿದೆ ಎಂಬುದು ಅಸತ್ಯ. ಇಂದು ಯುವಪೀಳಿಗೆಯು ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳುವ ಕಾಳಜಿಯನ್ನು ಹೊಂದಿದ್ದಾರೆ. ಬದುಕಿನಂತೆ ಸಾಹಿತ್ಯವೂ ವಿಸ್ತಾರವಾದುದು ಎಂದು ಸಾಹಿತಿ ನಾ. ಮೊಗಸಾಲೆ ಅಭಿಪ್ರಾಯಪಟ್ಟರು.

ಅವರು ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ಸಂಘ, ಐಕ್ಯುಎಸಿ ಘಟಕ ಮತ್ತು ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಸಹಯೋಗದೊಂದಿಗೆ ನಡೆದ ‘ಮೊಗಸಾಲೆ ಸಾಹಿತ್ಯ ವಿಹಾರ ಸರಣಿ’ ಕಾರ್ಯಕ್ರಮ ಮತ್ತು ಸಾಹಿತ್ಯಗೋಷ್ಠಿಯಲ್ಲಿ ಅತಿಥಿಯಾಗಿ  ಮಾತನಾಡಿದರು.ಸಾಹಿತ್ಯ ಬಗೆಗಿನ ಪ್ರೀತಿ ಹಾಗೂ ಅಧ್ಯಯನವು ಸಾಹಿತ್ಯದ ಬೆಳವಣಿಗೆಗೆ ಸಹಾಯಕವಾಗುತ್ತದೆ. ಸಾಹಿತ್ಯದ ಕುರಿತಾದ ವಿಚಾರಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಸಾಹಿತ್ಯವು ಜನರ ಮನದಲ್ಲಿ ಸಂವೇದನೆಯನ್ನು ಚಿಗುರಿಸುತ್ತದೆ. ಸಾಹಿತ್ಯದಲ್ಲಿ ಸ್ವಂತಿಕೆ ಹಾಗೂ ಬದ್ಧತೆಯನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ. ಜಯರಾಮ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ನಾ. ಮೊಗಸಾಲೆಯವರು ಕಾಂತಾವರ ಎಂಬ ಚಿಕ್ಕ ಹಳ್ಳಿಯಲ್ಲಿ ಸಾಹಿತ್ಯ ಕೃಷಿಯನ್ನು ಆರಂಭಿಸಿದವರು. ವೈದ್ಯನಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ಸಾಧಕರನ್ನು ಪರಿಚಯಿಸುವಲ್ಲಿ ನಾ. ಮೊಗಸಾಲೆಯವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಕಾಂತಾವರ ಎಂಬ ಪುಟ್ಟ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳನ್ನು ಆಯೋಜಿಸಿ ಕಾಂತಾವರವನ್ನು ಮುಖ್ಯಭೂಮಿಕೆಗೆ ತಂದಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಕಾಸರಗೋಡಿನ ಸ್ನಾತಕೋತ್ತರ ಕೇಂದ್ರದ ರವಿಶಂಕರ್ ಜಿ.ಕೆ., ಮೊಗಸಾಲೆಯವರ ಕಾದಂಬರಿಗಳನ್ನು ವಿಮರ್ಶಿಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕನ್ನಡ ಉಪನ್ಯಾಸಕ ವಿಶ್ವನಾಥ ನೇರಳಕಟ್ಟೆ ನಾ. ಮೊಗಸಾಲೆ ಅವರ ಸಣ್ಣಕಥೆಗಳ ಬಗ್ಗೆ ವಿಮರ್ಶಿಸಿದರು.

ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಹೆಚ್.ಜಿ. ಶ್ರೀಧರ್ ಪ್ರಸ್ತಾವನೆಗೈದರು. ವಿದ್ಯಾರ್ಥಿಗಳಾದ ದಿವ್ಯಶ್ರೀ, ಸ್ವಾತಿ ಪ್ರಾರ್ಥಿಸಿದರು. ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಬಿ. ಜನಾರ್ದನ ಭಟ್ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ಸದಾನಂದ ನಾರಾವಿ ವಂದಿಸಿದರು. ವಿದ್ಯಾರ್ಥಿ ರಾಮಕಿಶನ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago