Advertisement
ಸುದ್ದಿಗಳು

ಬದುಕಿನಂತೆ ಸಾಹಿತ್ಯವೂ ವಿಸ್ತಾರವಾಗಿದೆ: ನಾ. ಮೊಗಸಾಲೆ

Share

ಪುತ್ತೂರು: ಸಾಹಿತ್ಯದಿಂದ ಅಸಹನೆ ದೂರವಾಗುತ್ತದೆ. ಸಾಹಿತಿಗಳು ಅಸಹನೆ ದೂರಮಾಡುವಲ್ಲಿ ಸಾಹಿತ್ಯದ ಕೊಡುಗೆ ನೀಡುತ್ತಿದ್ದಾರೆ. ವಿನಯ, ಔದಾರ್ಯವನ್ನು ಜನರ ಮನದಲ್ಲಿ ತುಂಬುವ ಕಾರ್ಯವನ್ನು ಸಾಹಿತ್ಯವು ಮಾಡುತ್ತದೆ. ಸಾಹಿತ್ಯ ಬರಡಾಗಿದೆ ಎಂಬುದು ಅಸತ್ಯ. ಇಂದು ಯುವಪೀಳಿಗೆಯು ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳುವ ಕಾಳಜಿಯನ್ನು ಹೊಂದಿದ್ದಾರೆ. ಬದುಕಿನಂತೆ ಸಾಹಿತ್ಯವೂ ವಿಸ್ತಾರವಾದುದು ಎಂದು ಸಾಹಿತಿ ನಾ. ಮೊಗಸಾಲೆ ಅಭಿಪ್ರಾಯಪಟ್ಟರು.

Advertisement
Advertisement

ಅವರು ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ಸಂಘ, ಐಕ್ಯುಎಸಿ ಘಟಕ ಮತ್ತು ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಸಹಯೋಗದೊಂದಿಗೆ ನಡೆದ ‘ಮೊಗಸಾಲೆ ಸಾಹಿತ್ಯ ವಿಹಾರ ಸರಣಿ’ ಕಾರ್ಯಕ್ರಮ ಮತ್ತು ಸಾಹಿತ್ಯಗೋಷ್ಠಿಯಲ್ಲಿ ಅತಿಥಿಯಾಗಿ  ಮಾತನಾಡಿದರು.ಸಾಹಿತ್ಯ ಬಗೆಗಿನ ಪ್ರೀತಿ ಹಾಗೂ ಅಧ್ಯಯನವು ಸಾಹಿತ್ಯದ ಬೆಳವಣಿಗೆಗೆ ಸಹಾಯಕವಾಗುತ್ತದೆ. ಸಾಹಿತ್ಯದ ಕುರಿತಾದ ವಿಚಾರಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಸಾಹಿತ್ಯವು ಜನರ ಮನದಲ್ಲಿ ಸಂವೇದನೆಯನ್ನು ಚಿಗುರಿಸುತ್ತದೆ. ಸಾಹಿತ್ಯದಲ್ಲಿ ಸ್ವಂತಿಕೆ ಹಾಗೂ ಬದ್ಧತೆಯನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

Advertisement

ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ. ಜಯರಾಮ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ನಾ. ಮೊಗಸಾಲೆಯವರು ಕಾಂತಾವರ ಎಂಬ ಚಿಕ್ಕ ಹಳ್ಳಿಯಲ್ಲಿ ಸಾಹಿತ್ಯ ಕೃಷಿಯನ್ನು ಆರಂಭಿಸಿದವರು. ವೈದ್ಯನಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ಸಾಧಕರನ್ನು ಪರಿಚಯಿಸುವಲ್ಲಿ ನಾ. ಮೊಗಸಾಲೆಯವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಕಾಂತಾವರ ಎಂಬ ಪುಟ್ಟ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳನ್ನು ಆಯೋಜಿಸಿ ಕಾಂತಾವರವನ್ನು ಮುಖ್ಯಭೂಮಿಕೆಗೆ ತಂದಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಕಾಸರಗೋಡಿನ ಸ್ನಾತಕೋತ್ತರ ಕೇಂದ್ರದ ರವಿಶಂಕರ್ ಜಿ.ಕೆ., ಮೊಗಸಾಲೆಯವರ ಕಾದಂಬರಿಗಳನ್ನು ವಿಮರ್ಶಿಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕನ್ನಡ ಉಪನ್ಯಾಸಕ ವಿಶ್ವನಾಥ ನೇರಳಕಟ್ಟೆ ನಾ. ಮೊಗಸಾಲೆ ಅವರ ಸಣ್ಣಕಥೆಗಳ ಬಗ್ಗೆ ವಿಮರ್ಶಿಸಿದರು.

Advertisement

ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಹೆಚ್.ಜಿ. ಶ್ರೀಧರ್ ಪ್ರಸ್ತಾವನೆಗೈದರು. ವಿದ್ಯಾರ್ಥಿಗಳಾದ ದಿವ್ಯಶ್ರೀ, ಸ್ವಾತಿ ಪ್ರಾರ್ಥಿಸಿದರು. ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಬಿ. ಜನಾರ್ದನ ಭಟ್ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ಸದಾನಂದ ನಾರಾವಿ ವಂದಿಸಿದರು. ವಿದ್ಯಾರ್ಥಿ ರಾಮಕಿಶನ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

10 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

10 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

14 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

14 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

15 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

16 hours ago