ಬದುಕಿನುದ್ದಕ್ಕೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ

August 31, 2019
3:00 PM

ಸುಳ್ಯ:ರೆಡ್‍ಕ್ರಾಸ್ ಸಂಸ್ಥೆ ಮಾನವೀಯತೆಯ ನೆಲೆಯಲ್ಲಿ ಅಸ್ಥಿತ್ವಕ್ಕೆ ಬಂದಿದ್ದು, ಅದು ಮನುಷ್ಯತ್ವವನ್ನು ಗೌರವಿಸುವ ಸಂಸ್ಥೆಯಾಗಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದೆ. ತಮ್ಮ ಬದುಕಿನಲ್ಲೂ ಯಾವತ್ತೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ ಎಂದು ನೆಹರೂ ಮೆಮೋರಿಯಲ್‍ ಕಾಲೇಜಿನ ಕನ್ನಡ ಉಪಸ್ಯಾಸಕಿ, ವಲಯ ತರಬೇತುದಾರೆ ಡಾ. ಅನುರಾಧಾ ಕುರುಂಜಿ ಅಭಿಪ್ರಾಯಪಟ್ಟರು.

ಅವರು ಸುಳ್ಯದ ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್‍ ಘಟಕದ ವತಿಯಿಂದ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್‍ ಕುರಿತು ಮಾಹಿತಿ ನೀಡುತ್ತಾ ಮಾತನಾಡುತ್ತಿದ್ದರು. ರೆಡ್‍ಕ್ರಾಸ್ ಸಂಸ್ಥೆ ಜನರನ್ನುಸಮಾಜಮುಖಿ ವ್ಯಕ್ತಿಯನ್ನಾಗಿ ಬೆಳೆಸುತ್ತದೆ. ಸಂಸ್ಥೆಯಲ್ಲಿ ಕಲಿತುದ್ದನ್ನು ಕೇವಲ ಸಂಸ್ಥೆಗೆ ಸೀಮಿತವಾಗಿಡದೇ ಜೀವನಕ್ಕೆ ಅಳವಡಿಸಿಕೊಳ್ಳಿ, ಮನುಷ್ಯರನ್ನು ಮನುಷ್ಯರನ್ನಾಗಿಕಾಣುತ್ತಾ ನಿಮ್ಮ ಭವಿಷ್ಯವನ್ನು ನೀವೇ ರೂಪಿಸುವ ಕಡೆಗೆ ಗಮನಹರಿಸಿ ಎಂದರು.

ರೆಡ್‍ಕ್ರಾಸ್‍ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಯಾನ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror