ಸುಳ್ಯ:ರೆಡ್ಕ್ರಾಸ್ ಸಂಸ್ಥೆ ಮಾನವೀಯತೆಯ ನೆಲೆಯಲ್ಲಿ ಅಸ್ಥಿತ್ವಕ್ಕೆ ಬಂದಿದ್ದು, ಅದು ಮನುಷ್ಯತ್ವವನ್ನು ಗೌರವಿಸುವ ಸಂಸ್ಥೆಯಾಗಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದೆ. ತಮ್ಮ ಬದುಕಿನಲ್ಲೂ ಯಾವತ್ತೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ ಎಂದು ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪಸ್ಯಾಸಕಿ, ವಲಯ ತರಬೇತುದಾರೆ ಡಾ. ಅನುರಾಧಾ ಕುರುಂಜಿ ಅಭಿಪ್ರಾಯಪಟ್ಟರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ ಕುರಿತು ಮಾಹಿತಿ ನೀಡುತ್ತಾ ಮಾತನಾಡುತ್ತಿದ್ದರು. ರೆಡ್ಕ್ರಾಸ್ ಸಂಸ್ಥೆ ಜನರನ್ನುಸಮಾಜಮುಖಿ ವ್ಯಕ್ತಿಯನ್ನಾಗಿ ಬೆಳೆಸುತ್ತದೆ. ಸಂಸ್ಥೆಯಲ್ಲಿ ಕಲಿತುದ್ದನ್ನು ಕೇವಲ ಸಂಸ್ಥೆಗೆ ಸೀಮಿತವಾಗಿಡದೇ ಜೀವನಕ್ಕೆ ಅಳವಡಿಸಿಕೊಳ್ಳಿ, ಮನುಷ್ಯರನ್ನು ಮನುಷ್ಯರನ್ನಾಗಿಕಾಣುತ್ತಾ ನಿಮ್ಮ ಭವಿಷ್ಯವನ್ನು ನೀವೇ ರೂಪಿಸುವ ಕಡೆಗೆ ಗಮನಹರಿಸಿ ಎಂದರು.
ರೆಡ್ಕ್ರಾಸ್ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಯಾನ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…