Advertisement
ಅನುಕ್ರಮ

ಬದುಕಿನ ಬಣ್ಣ ಹೆಚ್ಚಿಸುವ ಮೋಡಗಳು

Share
ನಿಲ್ಲಿ ಮೋಡಗಳೆ ಎಲ್ಲಿ ಓಡುವಿರಿ
ನಾಲ್ಕು ಹನಿಯ ಸುರಿಸಿ ಎಂದು ರೇಡಿಯೋ ದಲ್ಲಿ ಬರುತ್ತಿದ್ದರೆ ಅಂಗಳಕ್ಕೆ ಹೋಗಿ ಆಕಾಶದಲ್ಲಿ ಓಡೋ ಮೋಡಗಳನ್ನು ನೋಡುತ್ತಿದ್ದುದು ನಿನ್ನೆ ಮೊನ್ನೆ ನಡೆದಂತಿದೆ.
ಮೋಡಗಳ ಓಟವೋ ಹುಚ್ಚು ಹಿಡಿಸುವಂತಿರುತ್ತದೆ. ಒಮ್ಮೆ ಪರ್ವತ, ನೋಡುತ್ತಿದ್ದಂತೆ ನದಿ, ಜಲಪಾತ, ಮಗದೊಮ್ಮೆ ಆನೆ, ಹುಲಿ ಕುರಿ, ಹಾವು. ನಿಧಾನ ಗತಿಯಲ್ಲಿ ಬದಲಾಗುವ ಮೋಡಗಳ ಬಣ್ಣಗಳು ಕಲ್ಪನೆಯ ಆಕಾರಕ್ಕೆ ರೂಪ ಕೊಡುತ್ತದವೆ. ಚಲಿಸುತ್ತಿರುವ ಮೋಡಗಳನ್ನು ಸುಮ್ಮನೆ ಕುಳಿತು ನೋಡುವುದೇ ಕಣ್ಣಿಗೆ ಹಬ್ಬ.
ನೀಲಿಯ ಆಕಾಶದಲ್ಲಿ ದೂರ ದೂರಕೆ ಒಂದೊಂದು ಮೋಡಗಳು ಕಾಣಿಸಲಾರಂಭಿಸಿದವೆಂರೆ ಮನಸು‌ ಮುದಗೊಳ್ಳುತ್ತದೆ.  ಪುಟ್ಟ ಪುಟ್ಟ ಮೋಡಗಳು ಒಂದಕ್ಕೊಂದು ಜೊತೆಯಾಗುತ್ತಿದ್ದಂತೆ ಒಂದನೇ ತರಗತಿಯ ಮಕ್ಕಳು ಕೈ ಕೈ ಹಿಡಿದು ತರಗತಿಯೊಳಗೆ ಹೋಗುವುದೇ ನೆನಪಾಗುತ್ತದೆ.
ಹೊತ್ತು ಮುಳುಗುತ್ತಿದ್ದಂತೆ ಬೇರೆ ಬೇರೆ ಬಣ್ಣಗಳಲ್ಲಿ ವಿವಿಧ ಆಕಾರಗಳಲ್ಲಿ ಗೋಚರವಾಗುವ ಮೋಡಗಳು ನಮ್ಮ ನಮ್ಮ ಕಲ್ಪನೆಗೆ ತಕ್ಕಂತೆ ರೂಪ ತಳೆಯುತ್ತದೆ. ಅಲ್ಲಿ ಅಜ್ಜ ಕಾಣ್ತಾರೆ, ಅಜ್ಜಿ ಬರುತ್ತಾಳೆ, ದೂರಾದ ಗೆಳೆಯ , ಗೆಳತಿಯರು ನೆನಪಾಗುತ್ತಾರೆ, ತರಗತಿಯಲ್ಲಿ ಪಕ್ಕದಲ್ಲೇ ಕುಳಿತಿರುತ್ತಿದ್ದ ಗತಿಸಿ ಹೋದ ಗೆಳತಿಯ ನೆನೆದು ಕಣ್ಣೀರು ನನಗರಿಯದೆ ಬಂದುಬಿಡುತ್ತದೆ.
ಕವಿಯ ಕಲ್ಪನೆಗೆ ಸ್ಪೂರ್ತಿ ಯಾಗುವ ಮೋಡಗಳು ಹೊಸ ಹೊಸ ಕವನಗಳ ಸಾಧ್ಯತೆ ಯನ್ನು ತೆರೆದಿಡುತ್ತದೆ. ಕಲಾವಿದನ ನಾಟ್ಯಾಭಿ ನಯಕ್ಕೆ ಮಾರ್ಗದರ್ಶಿಯಾಗುತ್ತದೆ. ವರ್ಣಗಾರನ ಚಿತ್ರಿಕೆಗೆ ರೂಪದರ್ಶಿಯಾಗಿ ಮೋಡಗಳು ಮೆರೆಯುತ್ತವೆ. ತನ್ನ ಓಟದ ವೇಗದಲ್ಲೇ ಬದಲಾಗುವ ಕಾಲಮಾನವನ್ನು ಸೂಚ್ಯವಾಗಿ ಮೋಡಗಳು ತೋರಿಸುತ್ತವೆ.
ಬದುಕಿನ ನಶ್ವರತೆಯನ್ನು   ಮೋಡಗಳು    ಸೂಚಿಸುತ್ತವೆ. ನಾವು ಅಂದು ಕೊಂಡಂತೆ ಯಾವುದೂ ನಡೆಯುವುದಿಲ್ಲ, ಭಗವಂತನ ಇಚ್ಛೆಯಂತೆ , ನಮ್ಮನ್ನೂ ಸೇರಿದಂತೆ ಜಗತ್ತು ನಡೆಯುತ್ತದೆ ಎಂದು ಮೋಡಗಳು ಸಾರಿ ಸಾರಿ ಹೇಳುತ್ತಿವೆಯೇನೋ ಅನ್ನಿಸುತ್ತಿದೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

10 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago