Advertisement
ಅನುಕ್ರಮ

ಬದುಕಿನ ಬಣ್ಣ ಹೆಚ್ಚಿಸುವ ಮೋಡಗಳು

Share
ನಿಲ್ಲಿ ಮೋಡಗಳೆ ಎಲ್ಲಿ ಓಡುವಿರಿ
ನಾಲ್ಕು ಹನಿಯ ಸುರಿಸಿ ಎಂದು ರೇಡಿಯೋ ದಲ್ಲಿ ಬರುತ್ತಿದ್ದರೆ ಅಂಗಳಕ್ಕೆ ಹೋಗಿ ಆಕಾಶದಲ್ಲಿ ಓಡೋ ಮೋಡಗಳನ್ನು ನೋಡುತ್ತಿದ್ದುದು ನಿನ್ನೆ ಮೊನ್ನೆ ನಡೆದಂತಿದೆ.
ಮೋಡಗಳ ಓಟವೋ ಹುಚ್ಚು ಹಿಡಿಸುವಂತಿರುತ್ತದೆ. ಒಮ್ಮೆ ಪರ್ವತ, ನೋಡುತ್ತಿದ್ದಂತೆ ನದಿ, ಜಲಪಾತ, ಮಗದೊಮ್ಮೆ ಆನೆ, ಹುಲಿ ಕುರಿ, ಹಾವು. ನಿಧಾನ ಗತಿಯಲ್ಲಿ ಬದಲಾಗುವ ಮೋಡಗಳ ಬಣ್ಣಗಳು ಕಲ್ಪನೆಯ ಆಕಾರಕ್ಕೆ ರೂಪ ಕೊಡುತ್ತದವೆ. ಚಲಿಸುತ್ತಿರುವ ಮೋಡಗಳನ್ನು ಸುಮ್ಮನೆ ಕುಳಿತು ನೋಡುವುದೇ ಕಣ್ಣಿಗೆ ಹಬ್ಬ.
ನೀಲಿಯ ಆಕಾಶದಲ್ಲಿ ದೂರ ದೂರಕೆ ಒಂದೊಂದು ಮೋಡಗಳು ಕಾಣಿಸಲಾರಂಭಿಸಿದವೆಂರೆ ಮನಸು‌ ಮುದಗೊಳ್ಳುತ್ತದೆ.  ಪುಟ್ಟ ಪುಟ್ಟ ಮೋಡಗಳು ಒಂದಕ್ಕೊಂದು ಜೊತೆಯಾಗುತ್ತಿದ್ದಂತೆ ಒಂದನೇ ತರಗತಿಯ ಮಕ್ಕಳು ಕೈ ಕೈ ಹಿಡಿದು ತರಗತಿಯೊಳಗೆ ಹೋಗುವುದೇ ನೆನಪಾಗುತ್ತದೆ.
ಹೊತ್ತು ಮುಳುಗುತ್ತಿದ್ದಂತೆ ಬೇರೆ ಬೇರೆ ಬಣ್ಣಗಳಲ್ಲಿ ವಿವಿಧ ಆಕಾರಗಳಲ್ಲಿ ಗೋಚರವಾಗುವ ಮೋಡಗಳು ನಮ್ಮ ನಮ್ಮ ಕಲ್ಪನೆಗೆ ತಕ್ಕಂತೆ ರೂಪ ತಳೆಯುತ್ತದೆ. ಅಲ್ಲಿ ಅಜ್ಜ ಕಾಣ್ತಾರೆ, ಅಜ್ಜಿ ಬರುತ್ತಾಳೆ, ದೂರಾದ ಗೆಳೆಯ , ಗೆಳತಿಯರು ನೆನಪಾಗುತ್ತಾರೆ, ತರಗತಿಯಲ್ಲಿ ಪಕ್ಕದಲ್ಲೇ ಕುಳಿತಿರುತ್ತಿದ್ದ ಗತಿಸಿ ಹೋದ ಗೆಳತಿಯ ನೆನೆದು ಕಣ್ಣೀರು ನನಗರಿಯದೆ ಬಂದುಬಿಡುತ್ತದೆ.
ಕವಿಯ ಕಲ್ಪನೆಗೆ ಸ್ಪೂರ್ತಿ ಯಾಗುವ ಮೋಡಗಳು ಹೊಸ ಹೊಸ ಕವನಗಳ ಸಾಧ್ಯತೆ ಯನ್ನು ತೆರೆದಿಡುತ್ತದೆ. ಕಲಾವಿದನ ನಾಟ್ಯಾಭಿ ನಯಕ್ಕೆ ಮಾರ್ಗದರ್ಶಿಯಾಗುತ್ತದೆ. ವರ್ಣಗಾರನ ಚಿತ್ರಿಕೆಗೆ ರೂಪದರ್ಶಿಯಾಗಿ ಮೋಡಗಳು ಮೆರೆಯುತ್ತವೆ. ತನ್ನ ಓಟದ ವೇಗದಲ್ಲೇ ಬದಲಾಗುವ ಕಾಲಮಾನವನ್ನು ಸೂಚ್ಯವಾಗಿ ಮೋಡಗಳು ತೋರಿಸುತ್ತವೆ.
ಬದುಕಿನ ನಶ್ವರತೆಯನ್ನು   ಮೋಡಗಳು    ಸೂಚಿಸುತ್ತವೆ. ನಾವು ಅಂದು ಕೊಂಡಂತೆ ಯಾವುದೂ ನಡೆಯುವುದಿಲ್ಲ, ಭಗವಂತನ ಇಚ್ಛೆಯಂತೆ , ನಮ್ಮನ್ನೂ ಸೇರಿದಂತೆ ಜಗತ್ತು ನಡೆಯುತ್ತದೆ ಎಂದು ಮೋಡಗಳು ಸಾರಿ ಸಾರಿ ಹೇಳುತ್ತಿವೆಯೇನೋ ಅನ್ನಿಸುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

7 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

7 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

16 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

17 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago