ಸುದ್ದಿಗಳು

ಬನಾರಿ ಯಕ್ಷಗಾನ ಕೇಂದ್ರದಲ್ಲಿ ತಾಳಮದ್ದಳೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂದಿರದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಸಂಜಯ ರಾಯಭಾರ ಯಕ್ಷಗಾನ ತಾಳಮದ್ದಳೆ ಜರಗಿತು.

Advertisement
Advertisement

ಬೆಂಗಳೂರಿನ ಶಂಭಯ್ಯ ಕೊಡಪಾಲ ಮತ್ತು ಮನೆಯವರ ಸೇವಾ ರೂಪವಾಗಿ ನಡೆಸಲ್ಪಟ್ಟ ಈ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಉಪಸ್ಥಿತಿಯಲ್ಲಿ ಸಂಘದ ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ನಡೆದ ಯಕ್ಷಗಾನ ತಾಳಮದ್ದಳೆಯಲ್ಲಿ ಭಾಗವತರಾಗಿ ಮೋಹನ ಮೆಣಸಿನಕಾನ, ಮಡ್ವ ಶಂಕರ ನಾರಾಯಣ ಭಟ್ ಮತ್ತು ನಿತೀಶ್ ಕುಮಾರ್ ಎಂಕಣ್ಣಮೂಲೆ ಸಹಕರಿಸಿದರು.

ಚೆಂಡೆ ಮದ್ದಳೆ ವಾದನದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ ಭಾಗವಹಿಸಿದರು. ಅರ್ಥಧಾರಿಗಳಾಗಿ ನಾರಾಯಣ ಮಾಸ್ತರ್ ದೇಲಂಪಾಡಿ (ಕೌರವ) ರಾಮಣ್ಣ ಮಾಸ್ತರ್ ದೇಲಂಪಾಡಿ (ಗುರುಕೃಪರು) ಬಿ.ಯಚ್ ವೆಂಕಪ್ಪ ಗೌಡ (ಕರ್ಣ) ರಾಮನಾಯ್ಕ್ ದೇಲಂಪಾಡಿ(ಅಶ್ವತ್ಥಾಮ) ಡಿ.ವೆಂಕಟ್ರಮಣ ಮಾಸ್ತರ್ ದೇಲಂಪಾಡಿ (ಸಂಜಯ) ಯಂ. ಐತ್ತಪ್ಪ ಗೌಡ ಮುದಿಯಾರು(ಶ್ರೀಕೃಷ್ಣ) ವಿದ್ಯಾಭೂಷಣ ಪಂಜಾಜೆ(ಭೀಮ) ಗೋಪಾಲಕೃಷ್ಣ ರೈ ಮುದಿಯಾರು(ಅರ್ಜುನ) ಶೇಖರ ಪಾಟಾಳಿ ಕಲ್ಲರ್ಪೆ(ದ್ರೌಪದಿ) ತಮ್ಮ ಅರ್ಥಗಾರಿಕೆಯಲ್ಲಿ ಗಮನ ಸೆಳೆದರು. ಲತಾ ಆಚಾರ್ಯ ಬನಾರಿ ಸ್ವಾಗತಿಸಿ, ದಿವ್ಯಾನಂದ ಪೆಂರ್ದಲಪದವು ಧನ್ಯವಾದ ಸಮರ್ಪಣೆಗೈದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

4 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

5 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

8 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

12 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

12 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

21 hours ago