Advertisement
ಸುದ್ದಿಗಳು

ಬನಾರಿ ಯಕ್ಷಗಾನ ಕೇಂದ್ರದಲ್ಲಿ ತಾಳಮದ್ದಳೆ

Share

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂದಿರದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಸಂಜಯ ರಾಯಭಾರ ಯಕ್ಷಗಾನ ತಾಳಮದ್ದಳೆ ಜರಗಿತು.

ಬೆಂಗಳೂರಿನ ಶಂಭಯ್ಯ ಕೊಡಪಾಲ ಮತ್ತು ಮನೆಯವರ ಸೇವಾ ರೂಪವಾಗಿ ನಡೆಸಲ್ಪಟ್ಟ ಈ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಉಪಸ್ಥಿತಿಯಲ್ಲಿ ಸಂಘದ ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ನಡೆದ ಯಕ್ಷಗಾನ ತಾಳಮದ್ದಳೆಯಲ್ಲಿ ಭಾಗವತರಾಗಿ ಮೋಹನ ಮೆಣಸಿನಕಾನ, ಮಡ್ವ ಶಂಕರ ನಾರಾಯಣ ಭಟ್ ಮತ್ತು ನಿತೀಶ್ ಕುಮಾರ್ ಎಂಕಣ್ಣಮೂಲೆ ಸಹಕರಿಸಿದರು.

ಚೆಂಡೆ ಮದ್ದಳೆ ವಾದನದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ ಭಾಗವಹಿಸಿದರು. ಅರ್ಥಧಾರಿಗಳಾಗಿ ನಾರಾಯಣ ಮಾಸ್ತರ್ ದೇಲಂಪಾಡಿ (ಕೌರವ) ರಾಮಣ್ಣ ಮಾಸ್ತರ್ ದೇಲಂಪಾಡಿ (ಗುರುಕೃಪರು) ಬಿ.ಯಚ್ ವೆಂಕಪ್ಪ ಗೌಡ (ಕರ್ಣ) ರಾಮನಾಯ್ಕ್ ದೇಲಂಪಾಡಿ(ಅಶ್ವತ್ಥಾಮ) ಡಿ.ವೆಂಕಟ್ರಮಣ ಮಾಸ್ತರ್ ದೇಲಂಪಾಡಿ (ಸಂಜಯ) ಯಂ. ಐತ್ತಪ್ಪ ಗೌಡ ಮುದಿಯಾರು(ಶ್ರೀಕೃಷ್ಣ) ವಿದ್ಯಾಭೂಷಣ ಪಂಜಾಜೆ(ಭೀಮ) ಗೋಪಾಲಕೃಷ್ಣ ರೈ ಮುದಿಯಾರು(ಅರ್ಜುನ) ಶೇಖರ ಪಾಟಾಳಿ ಕಲ್ಲರ್ಪೆ(ದ್ರೌಪದಿ) ತಮ್ಮ ಅರ್ಥಗಾರಿಕೆಯಲ್ಲಿ ಗಮನ ಸೆಳೆದರು. ಲತಾ ಆಚಾರ್ಯ ಬನಾರಿ ಸ್ವಾಗತಿಸಿ, ದಿವ್ಯಾನಂದ ಪೆಂರ್ದಲಪದವು ಧನ್ಯವಾದ ಸಮರ್ಪಣೆಗೈದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

7 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

7 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 day ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago