ಸುಳ್ಯ: ಸ್ವಚ್ಛ ಸುಳ್ಯದ ಅಭಿಯಾನ ಆರಂಭವಾಗಿದೆ. ಇಡೀ ಸುಳ್ಯವನ್ನು ಸ್ವಚ್ಛ ನಗರವನ್ನಾಗಿಸುವ ಉದ್ದೇಶದಿಂದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದಲ್ಲಿ ನಗರ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಅಭಿಯಾನ ಭಾನುವಾರ ನಡೆಯಿತು.
ನಿರಂತರ ನಡೆಯುವ ಅಭಿಯಾನದ ಏಳನೇ ವಾರದ ಸ್ವಚ್ಛತಾ ಕಾರ್ಯಕ್ಕೆ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಚಾಲನೆ ನೀಡಿದರು. ಹಳೆಗೇಟು ಪೆಟ್ರೋಲ್ ಪಂಪ್ನಿಂದ ಆರಂಭಗೊಂಡು ಜ್ಯೋತಿ ವೃತ್ತದ ವರೆಗೆ ನಡೆದ ಸ್ವಚ್ಛತಾ ಅಭಿಯಾನದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ನಗರ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಲಯನ್ಸ್ ಕ್ಲಬ್ ಅಧ್ಯಕ್ಷ ಜಗನ್ನಾಥ ರೈ, ಗೃಹರಕ್ಷಕ ದಳದ ಜಯಂತ ರೈ, ವಿನೋದ್ ಲಸ್ರಾದೋ, ಗೌತಂ ಭಟ್, ಕೆ.ಟಿ.ವಿಶ್ವನಾಥ, ಎ.ಎಂ.ಭಟ್. ಮನಮೋಹನ್, ದೊಡ್ಡಣ್ಣ ಬರೆಮೇಲು, ಲೋಕೇಶ್ ಗುಡ್ಡೆಮನೆ, ಹಸೈನಾರ್ ಜಯನಗರ, ಶರೀಫ್ ಜಟ್ಟಿಪಳ್ಳ, ಹಾಜಿ ಅಬ್ದುಲ್ ಸಮದ್, ಸತೀಶ್, ಕಿಶನ್, ಡಿ.ಎಸ್.ಗಿರೀಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಭಾಗವಹಿಸಿದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…