ಸುಳ್ಯ: ಸ್ವಚ್ಛ ಸುಳ್ಯದ ಅಭಿಯಾನ ಆರಂಭವಾಗಿದೆ. ಇಡೀ ಸುಳ್ಯವನ್ನು ಸ್ವಚ್ಛ ನಗರವನ್ನಾಗಿಸುವ ಉದ್ದೇಶದಿಂದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದಲ್ಲಿ ನಗರ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಅಭಿಯಾನ ಭಾನುವಾರ ನಡೆಯಿತು.
ನಿರಂತರ ನಡೆಯುವ ಅಭಿಯಾನದ ಏಳನೇ ವಾರದ ಸ್ವಚ್ಛತಾ ಕಾರ್ಯಕ್ಕೆ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಚಾಲನೆ ನೀಡಿದರು. ಹಳೆಗೇಟು ಪೆಟ್ರೋಲ್ ಪಂಪ್ನಿಂದ ಆರಂಭಗೊಂಡು ಜ್ಯೋತಿ ವೃತ್ತದ ವರೆಗೆ ನಡೆದ ಸ್ವಚ್ಛತಾ ಅಭಿಯಾನದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ನಗರ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಲಯನ್ಸ್ ಕ್ಲಬ್ ಅಧ್ಯಕ್ಷ ಜಗನ್ನಾಥ ರೈ, ಗೃಹರಕ್ಷಕ ದಳದ ಜಯಂತ ರೈ, ವಿನೋದ್ ಲಸ್ರಾದೋ, ಗೌತಂ ಭಟ್, ಕೆ.ಟಿ.ವಿಶ್ವನಾಥ, ಎ.ಎಂ.ಭಟ್. ಮನಮೋಹನ್, ದೊಡ್ಡಣ್ಣ ಬರೆಮೇಲು, ಲೋಕೇಶ್ ಗುಡ್ಡೆಮನೆ, ಹಸೈನಾರ್ ಜಯನಗರ, ಶರೀಫ್ ಜಟ್ಟಿಪಳ್ಳ, ಹಾಜಿ ಅಬ್ದುಲ್ ಸಮದ್, ಸತೀಶ್, ಕಿಶನ್, ಡಿ.ಎಸ್.ಗಿರೀಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಭಾಗವಹಿಸಿದ್ದರು.
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…