ಬರಕ್ಕೆ ನಲುಗಿದ ಸುಳ್ಯ : “ನೀರು ಕುಡಿಯುವ ಮನೆ”ಯಲ್ಲೂ ನೀರಿಲ್ಲ…!

June 3, 2019
11:00 AM

ಸುಳ್ಯ: ಸುಳ್ಯ ಹಿಂದೆಂದೂ ಕಾಣದ ಭೀಕರ ಬರಕ್ಕೆ ನಲುಗಿ ಹೋಗಿದೆ. ಪೂರ್ವ ಮುಂಗಾರು ಕೊರತೆ ಹಾಗೂ ಬಿರು ಬಿಸಿಲಿನ ತಾಪಕ್ಕೆ ಜಲಾಶ್ರಯ ಗಳು ಬತ್ತಿ ಹೋಗಿದ್ದು ಎಲ್ಲೆಡೆ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಹಿಂದೆಂದೂ ಬತ್ತದೇ ಇದ್ದ ನೀರಿನ ಮೂಲಗಳು ಬತ್ತುತ್ತಿದ್ದು ಜನತೆ ಆಕಾಶದತ್ತ ನೋಡುವಂತಾಗಿದೆ.

ಸುಳ್ಯದ ಬೂಡು ಪರಿಸರದ ಗಣೇಶ್ ಆಚಾರ್ಯ ಎಂಬವರ ಮನೆಯ ಸನಿಹ ಸುರಂಗ ಬಾವಿಯೊಂದಿದೆ. ಈ ಬಾವಿ ಕಳೆದ ಎಂಭತ್ತ್ತು ವರ್ಷಗಳಿಂದ ಪರಿಸರದ ಜನರ ದಾಹ ತೀರಿಸುತ್ತಿದೆ. ದಾರಿಹೋಕರು ಹಾಗೂ ಸುತ್ತಲಿನ ಪರಿಸರದ ಜನ ಕುಡಿಯುವ ನೀರಿಗಾಗಿ ಇದೇ ಸುರಂಗ ಬಾವಿಯನ್ನು ಆಶ್ರಯಿಸಿದ್ದರು. ಸ್ಥಳೀಯರೆಲ್ಲರಿಗೂ ನೀರನ್ನು ಪೂರೈಸುವ ಈ ಮನೆಯನ್ನು ‘ನೀರು ಕುಡಿಯುವ ಮನೆ‘ ಎಂದೇ ಕರೆಯುತ್ತಿದ್ದರು. ಗಣೇಶ್ ಆಚಾರ್ಯರ ತಂದೆ ಮಂಜುನಾಥ ಆಚಾರ್ಯ ಹಾಗೂ ಅಜ್ಜ ರಾಮಯ್ಯ ಆಚಾರ್ಯರು ಈ ಸುರಂಗ ಬಾವಿಯನ್ನು 80 ವರ್ಷಗಳ ಹಿಂದೆ ನಿರ್ಮಿಸಿದ್ದು ಈ ಬಾವಿ ಅಲ್ಲಿಂದ ಇಲ್ಲಿಯವರೆಗೆ ಹಲವರ ನೀರು ದಾಹವನ್ನು ತೀರಿಸಿದೆ. ಬಾಯಾರಿ ಬಂದವರಿಗೆ ದಣಿವಾರಿಸಿ ಕೊಳ್ಳಲು ನೀರು ನೀಡುತ್ತಿದ್ದ ಈ ಬಾವಿಯಲ್ಲಿ ಈ ಬಾರಿಯ ಬಿಸಿಲು ಹಾಗೂ ಬರದಿಂದಾಗಿ ಒಂದು ಹನಿಯೂ ನೀರು ಲಭ್ಯವಿಲ್ಲ.

ಕಟ್ಟಡ ನಿರ್ಮಾಣಕ್ಕೂ ಬಳಕೆ: ಬೂಡುವಿನಲ್ಲಿ ನಿರ್ಮಾಣಗೊಂಡ ಕೆ.ಇ.ಬಿ ಸಿಬ್ಬಂದಿಗಳ ವಸತಿ ಗೃಹದ ನಿರ್ಮಾಣಕ್ಕೂ ಈ ಬಾವಿ ನೀರನ್ನು ಬಳಸಲಾಗಿತ್ತು. ಅಲ್ಲದೇ ಸ್ಥಳೀಯ ಪರಿಸರದಲ್ಲಿ ನಿರ್ಮಾಣಗೊಂಡ ಬಹುತೇಕ ಕಟ್ಟಡಗಳಿಗೆ ಇದೇ ಬಾವಿಯ ನೀರನ್ನು ಬಳಸಲಾಗಿತ್ತು. ಯಥೇಚ್ಛವಾಗಿ ದೊರೆಯುತ್ತಿದ್ದ ನೀರು ಇದೀಗ ಬತ್ತಿರುವುದು ಸ್ಥಳೀಯ ನಿವಾಸಿಗಳಿಗೆ ಬೇಸರ ಜೊತೆಗೆ ಆಶ್ಚರ್ಯವನ್ನು ಉಂಟುಮಾಡಿದೆ.

ನೀರು ಕೇಳಿದಾಗ ಇಲ್ಲ ಎನ್ನಬಾರದು: ಬಾವಿ ತೊಡಿದ ದಿ|ರಾಮಯ್ಯ ಆಚಾರ್ಯರವರು ಮಕ್ಕಳಿಗೆ ಯಾರೂ ನೀರು ಕೇಳಿದರೂ ಇಲ್ಲ ಎನ್ನಬಾರದು ಎಂದು ಹೇಳಿದ್ದರು. ಅಲ್ಲಿಂದ ಇಲ್ಲಿಯವರೆಗೆ ಯಾರೊಬ್ಬರಿಗೂ ನೀರು ಇಲ್ಲ ಎಂದು ಹೇಳದೆ ಬೇಕಾದಷ್ಟು ನೀರನ್ನು ಕೊಡಲಾ
ಗಿತ್ತು. ಆದರೆ ಈಗ ಬಾವಿಯಲ್ಲಿ ನೀರು ಬತ್ತಿರುವುದರಿಂದ ನೀರು ಇಲ್ಲ ಎಂದು ಹೇಳಲು ಸಂಕಟವಾಗುತ್ತಿದೆ ಎನ್ನುತ್ತಾರೆ ಗಣೇಶ್ ಆಚಾರ್ಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror