Advertisement
ವಿಶೇಷ ವರದಿಗಳು

ಬರಕ್ಕೆ ನಲುಗಿದ ಸುಳ್ಯ : “ನೀರು ಕುಡಿಯುವ ಮನೆ”ಯಲ್ಲೂ ನೀರಿಲ್ಲ…!

Share

ಸುಳ್ಯ: ಸುಳ್ಯ ಹಿಂದೆಂದೂ ಕಾಣದ ಭೀಕರ ಬರಕ್ಕೆ ನಲುಗಿ ಹೋಗಿದೆ. ಪೂರ್ವ ಮುಂಗಾರು ಕೊರತೆ ಹಾಗೂ ಬಿರು ಬಿಸಿಲಿನ ತಾಪಕ್ಕೆ ಜಲಾಶ್ರಯ ಗಳು ಬತ್ತಿ ಹೋಗಿದ್ದು ಎಲ್ಲೆಡೆ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಹಿಂದೆಂದೂ ಬತ್ತದೇ ಇದ್ದ ನೀರಿನ ಮೂಲಗಳು ಬತ್ತುತ್ತಿದ್ದು ಜನತೆ ಆಕಾಶದತ್ತ ನೋಡುವಂತಾಗಿದೆ.

ಸುಳ್ಯದ ಬೂಡು ಪರಿಸರದ ಗಣೇಶ್ ಆಚಾರ್ಯ ಎಂಬವರ ಮನೆಯ ಸನಿಹ ಸುರಂಗ ಬಾವಿಯೊಂದಿದೆ. ಈ ಬಾವಿ ಕಳೆದ ಎಂಭತ್ತ್ತು ವರ್ಷಗಳಿಂದ ಪರಿಸರದ ಜನರ ದಾಹ ತೀರಿಸುತ್ತಿದೆ. ದಾರಿಹೋಕರು ಹಾಗೂ ಸುತ್ತಲಿನ ಪರಿಸರದ ಜನ ಕುಡಿಯುವ ನೀರಿಗಾಗಿ ಇದೇ ಸುರಂಗ ಬಾವಿಯನ್ನು ಆಶ್ರಯಿಸಿದ್ದರು. ಸ್ಥಳೀಯರೆಲ್ಲರಿಗೂ ನೀರನ್ನು ಪೂರೈಸುವ ಈ ಮನೆಯನ್ನು ‘ನೀರು ಕುಡಿಯುವ ಮನೆ‘ ಎಂದೇ ಕರೆಯುತ್ತಿದ್ದರು. ಗಣೇಶ್ ಆಚಾರ್ಯರ ತಂದೆ ಮಂಜುನಾಥ ಆಚಾರ್ಯ ಹಾಗೂ ಅಜ್ಜ ರಾಮಯ್ಯ ಆಚಾರ್ಯರು ಈ ಸುರಂಗ ಬಾವಿಯನ್ನು 80 ವರ್ಷಗಳ ಹಿಂದೆ ನಿರ್ಮಿಸಿದ್ದು ಈ ಬಾವಿ ಅಲ್ಲಿಂದ ಇಲ್ಲಿಯವರೆಗೆ ಹಲವರ ನೀರು ದಾಹವನ್ನು ತೀರಿಸಿದೆ. ಬಾಯಾರಿ ಬಂದವರಿಗೆ ದಣಿವಾರಿಸಿ ಕೊಳ್ಳಲು ನೀರು ನೀಡುತ್ತಿದ್ದ ಈ ಬಾವಿಯಲ್ಲಿ ಈ ಬಾರಿಯ ಬಿಸಿಲು ಹಾಗೂ ಬರದಿಂದಾಗಿ ಒಂದು ಹನಿಯೂ ನೀರು ಲಭ್ಯವಿಲ್ಲ.

ಕಟ್ಟಡ ನಿರ್ಮಾಣಕ್ಕೂ ಬಳಕೆ: ಬೂಡುವಿನಲ್ಲಿ ನಿರ್ಮಾಣಗೊಂಡ ಕೆ.ಇ.ಬಿ ಸಿಬ್ಬಂದಿಗಳ ವಸತಿ ಗೃಹದ ನಿರ್ಮಾಣಕ್ಕೂ ಈ ಬಾವಿ ನೀರನ್ನು ಬಳಸಲಾಗಿತ್ತು. ಅಲ್ಲದೇ ಸ್ಥಳೀಯ ಪರಿಸರದಲ್ಲಿ ನಿರ್ಮಾಣಗೊಂಡ ಬಹುತೇಕ ಕಟ್ಟಡಗಳಿಗೆ ಇದೇ ಬಾವಿಯ ನೀರನ್ನು ಬಳಸಲಾಗಿತ್ತು. ಯಥೇಚ್ಛವಾಗಿ ದೊರೆಯುತ್ತಿದ್ದ ನೀರು ಇದೀಗ ಬತ್ತಿರುವುದು ಸ್ಥಳೀಯ ನಿವಾಸಿಗಳಿಗೆ ಬೇಸರ ಜೊತೆಗೆ ಆಶ್ಚರ್ಯವನ್ನು ಉಂಟುಮಾಡಿದೆ.

ನೀರು ಕೇಳಿದಾಗ ಇಲ್ಲ ಎನ್ನಬಾರದು: ಬಾವಿ ತೊಡಿದ ದಿ|ರಾಮಯ್ಯ ಆಚಾರ್ಯರವರು ಮಕ್ಕಳಿಗೆ ಯಾರೂ ನೀರು ಕೇಳಿದರೂ ಇಲ್ಲ ಎನ್ನಬಾರದು ಎಂದು ಹೇಳಿದ್ದರು. ಅಲ್ಲಿಂದ ಇಲ್ಲಿಯವರೆಗೆ ಯಾರೊಬ್ಬರಿಗೂ ನೀರು ಇಲ್ಲ ಎಂದು ಹೇಳದೆ ಬೇಕಾದಷ್ಟು ನೀರನ್ನು ಕೊಡಲಾ
ಗಿತ್ತು. ಆದರೆ ಈಗ ಬಾವಿಯಲ್ಲಿ ನೀರು ಬತ್ತಿರುವುದರಿಂದ ನೀರು ಇಲ್ಲ ಎಂದು ಹೇಳಲು ಸಂಕಟವಾಗುತ್ತಿದೆ ಎನ್ನುತ್ತಾರೆ ಗಣೇಶ್ ಆಚಾರ್ಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

1 hour ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

2 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

18 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

20 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

1 day ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago