ಬರಗಾಲದ ಮಧ್ಯೆಯೂ 3 ಎಕರೆಯ ಕಾನಾವು ಕೆರೆಯಲ್ಲಿ ನೀರು ಸಮೃದ್ಧ

May 18, 2019
8:00 AM

ಸವಣೂರು : ನೀರು ಎಲ್ಲಿದೆ….. ಕುಡಿಯುವ ನೀರಾದರೂ ಉಂಟೇ…? ಹೀಗೆಂದು ಪ್ರಶ್ನೆ ಮಾಡುವ ಈ   ಸಮಯದಲ್ಲಿ ಕಾನಾವು ಕೆರೆಯಲ್ಲಿ ಈಗಿನ ಸಂದರ್ಭದಲ್ಲಿ ಸಮೃದ್ಧ ನೀರಿದೆ.

ಈಗ ಎಲ್ಲೆಡೆ ನೀರಿನ ಬರದ್ದೆ ಸುದ್ದಿ. ಕುಡಿಯಲು ನೀರಿಲ್ಲ, ತೋಟ ನೀರಿಲ್ಲದೇ ಕೆಂಪಾಗಿದೆ ಎನ್ನುವ ಮಾತು ಬಹುವಾಗಿ ಕೇಳಿಬರುತ್ತಿದೆ. ನೀರಿನ ಬವಣೆ ಹೋಗಲಾಡಿಸುವ ಸಲುವಾಗಿ ಒಡ್ಡುಗಳನ್ನು ನಿರ್ಮಿಸಿ ಓಡುವ ನೀರನ್ನು ನಿಲ್ಲಿಸಿ, ನಿಂತ ನೀರನ್ನು ಇಂಗಿಸಿ ಎಂದು ಇಂದಿನ ದಿನಗಳಲ್ಲಿ  ಸಲಹೆ ನೀಡುತ್ತಿದ್ದಾರೆ. ಇದರಿಂದ ಮಣ್ಣಿನ ಫಲವತ್ತತೆ ಹಾಗೂ ಅಂತರ್ಜಲ ಮಟ್ಟ ಏರಿಸಲು ಸಾಧ್ಯವಾಗುತ್ತದೆ ಎಂದೂ ಹೇಳುತ್ತಾರೆ. ಆದರೆ, ಎಷ್ಟು ಜನರು ಕಾರ್ಯರೂಪಕ್ಕೆ ತರುತ್ತಾರೆ ಎನ್ನುವುದು ತಿಳಿಯದು. ಒಡ್ಡುಗಳನ್ನು ನಿರ್ಮಿಸಿ ನೀರು ಇಂಗಿಸುವ ಕಾರ್ಯ ಬಹಳ ಹಿಂದಿನ ದಿನಗಳಲ್ಲೂ ನಡೆಯುತ್ತಿತ್ತು. ಇದಕ್ಕೆ ಉದಾಹರಣೆ  ಸುಳ್ಯ ತಾಲೂಕಿನ  ಪೆರುವಾಜೆ ಗ್ರಾಮದ ಕಾನಾವು ಎಂಬಲ್ಲಿಯ ಮಂಜನಾಕಜೆ ಕಟ್ಟೆ.

ಕಾನಾವು ಕೆರೆ:

ಪೆರುವಾಜೆ ಗ್ರಾಮದ ಕಾನಾವು ಎಂಬಲ್ಲಿ ಸುಮಾರು 40 ವರ್ಷಗಳ ಹಿಂದೆ ನರಸಿಂಹ ಭಟ್ ಎಂಬವರು ಗುಡ್ಡದ ಬುಡದಲ್ಲಿ ಮಣ್ಣಿನ ಒಡ್ಡು ನಿರ್ಮಿಸಿ ಬೃಹತ್ ಕೆರೆ ನಿರ್ಮಾಣ ಮಾಡಿದ್ದಾರೆ. ಈ ಕೆರೆಯು ಸುಮಾರು 3 ಎಕರೆ ವಿಸ್ತೀರ್ಣದಲ್ಲಿದ್ದು, 30 ಅಡಿ ಆಳ ಹೊಂದಿದೆ. ಈ ಕೆರೆಯಲ್ಲಿ ಸಮೃದ್ಧವಾಗಿ ನೀರು ತುಂಬಿರುವುದರಿಂದ ಸುಮಾರು 35 ಎಕರೆ ಕೃಷಿ ತೋಟಕ್ಕೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಒಡ್ಡು ನಿರ್ಮಾಣದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲೂ ಒರತೆ ಪ್ರಮಾಣ ಸಾಕಷ್ಟು ಹೆಚ್ಚಿದ್ದು ಅನೇಕರಿಗೆ ಪ್ರಯೋಜನವಾಗಿದೆ. ಮಳೆಗಾಲದಲ್ಲಿ ಒಡ್ಡುವಿನ ಒಂದು ಭಾಗವನ್ನು ತೆರೆದು ನೀರು ಹೊರಬಿಡಲಾಗುತ್ತಿದೆ.

ಪಂಪ್‍ಸೆಟ್‍ನ ಅಗತ್ಯವೇ ಇಲ್ಲ
ಈ ಕೆರೆಯಿಂದ ತಗ್ಗು ಪ್ರದೇಶದಲ್ಲಿ ಅಡಿಕೆ, ತೆಂಗು ತೋಟವಿರುವುದರಿಂದ ಪಂಪ್‍ಸೆಟ್ ಇಲ್ಲದೇನೇ ಒಮ್ಮೆಗೆ 15 ಸ್ಪ್ರಿಂಕ್ಲರ್ ಮೂಲಕ ನೀರು ಸಿಂಪಡಿಸಲು ಸಾಧ್ಯವಾಗುತ್ತಿದೆ. ನರಸಿಂಹ ಭಟ್ ಅವರ ಪುತ್ರರಾದ ಗೋಪಾಲಕೃಷ್ಣ ಭಟ್ ಹಾಗೂ ತಿರುಮಲೇಶ್ವರ ಭಟ್ ಇದೀಗ ಆ ನೀರಿನ ಫಲಾನುಭವಿಗಳು.

ನಿಯಮಿತವಾಗಿ ಅಂದರೆ, ಯಾವ ಪ್ರಮಾಣದಲ್ಲಿ ನೀರನ್ನು ಗಿಡಕ್ಕೆ ಸಿಂಪಡಣೆ ಮಾಡಬೇಕು ಎನ್ನುವ ಅರಿವು ಇರುವ ಇವರು ಅವಶ್ಯಕತೆಗೆ ತಕ್ಕಂತೆ ನೀರು ಬಳಕೆ ಮಾಡಿಕೊಂಡು, ಆ ಕೆರೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಕೆರೆಯ ಸುತ್ತುಮುತ್ತಲಿನ ಕಾಡಿನ ನಾಶ ಮಾಡದೇ ಇವರು ಅದನ್ನ ಸಂರಕ್ಷಿಸಿಕೊಂಡು ಬಂದಿರುವುದು ಮಾತ್ರವಲ್ಲದೇ ಗಿಡಗಳನ್ನು ನೆಟ್ಟು ಪೋಷಿಸಿ ಇತರರಿಗೆ ಮಾದರಿಯಾಗಿದ್ದಾರೆ.

ನೀರಿನ ಸಂರಕ್ಷಣೆ
ನೀರಿನ ಮಹತ್ವವನ್ನು ತಿಳಿದು ನೀರಿನ ಸಂರಕ್ಷಣೆ ಮಾಡುವುದು ಪ್ರಥಮ ಆದ್ಯತೆಯಾಗಬೇಕು. ಬರ ಬಂದ ಬಳಿಕ ದುಖಿಸುವ ಬದಲು ಈಗಿನಿಂದಲೇ ನೀರಿನ ಸಂರಕ್ಷಣೆ, ಸಂವರ್ಧನೆ ಕುರಿತು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಬೇಕು. ಕೃಷಿಕರ ಪಂಪ್‍ಸೆಟ್‍ಗೆ ಉಚಿತ ವಿದ್ಯುತ್ ಪೂರೈಕೆಯಾಗುತ್ತಿಗುತ್ತಿರುವುದರಿಂದ ಕೆಲ ಕಡೆ ದುರುಪಯೋಗವಾಗುತ್ತಿರುವುದಕ್ಕೆ ಕಡಿವಾಣ ಬೀಳಬೇಕು. ಜನಸಾಮಾನ್ಯರು ನೀರಿನ ವಿಚಾರದಲ್ಲಿ ಸರಕಾರ ಅಥವಾ ಅಕಾರಿಗಳನ್ನು ಮಾತ್ರ ಬೊಟ್ಟು ಮಾಡಿ ತೋರಿಸದೇ ತಾವು ಅಳವಡಿಸಿಕೊಳ್ಳಬಹುದಾದ ಕ್ರಮಗಳತ್ತನೂ ಚಿಂತನೆ ಮಾಡಬೇಕು.

ಇಂದಿನ ನೀರಿನ ಸಮಸ್ಯೆ ಬಗ್ಗೆ ಮಾತನಾಡುವ ಗೋಪಾಲಕೃಷ್ಣ ಭಟ್ ಕಾನಾವು,“ನಾವು ಗಿಡ ನೆಟ್ಟು ಕಾಡು ಬೆಳೆಸಿ ಪ್ರಕೃತಿ ರಕ್ಷಣೆ ಮಾಡಲು ಮುಂದಾಗಬೇಕು. ನೀರಿನ ಮಹತ್ವ ತಿಳಿದು ಮಳೆಗಾಲದ ನೀರನ್ನು ಒಡ್ಡು ನಿರ್ಮಿಸುವುದರ ಮೂಲಕ ಇಂಗಿಸುವುದರೊಂದಿಗೆ ನೀರಿನ ಮಿತ ಬಳಕೆ ಮಾಡಬೇಕು, ಆಗ ಮಾತ್ರಾ ಪರಿಹಾರ ಸಾಧ್ಯ “ ಎಂದು ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror