Advertisement
MIRROR FOCUS

ಬರಗಾಲದ ಮಧ್ಯೆಯೂ 3 ಎಕರೆಯ ಕಾನಾವು ಕೆರೆಯಲ್ಲಿ ನೀರು ಸಮೃದ್ಧ

Share

ಸವಣೂರು : ನೀರು ಎಲ್ಲಿದೆ….. ಕುಡಿಯುವ ನೀರಾದರೂ ಉಂಟೇ…? ಹೀಗೆಂದು ಪ್ರಶ್ನೆ ಮಾಡುವ ಈ   ಸಮಯದಲ್ಲಿ ಕಾನಾವು ಕೆರೆಯಲ್ಲಿ ಈಗಿನ ಸಂದರ್ಭದಲ್ಲಿ ಸಮೃದ್ಧ ನೀರಿದೆ.

ಈಗ ಎಲ್ಲೆಡೆ ನೀರಿನ ಬರದ್ದೆ ಸುದ್ದಿ. ಕುಡಿಯಲು ನೀರಿಲ್ಲ, ತೋಟ ನೀರಿಲ್ಲದೇ ಕೆಂಪಾಗಿದೆ ಎನ್ನುವ ಮಾತು ಬಹುವಾಗಿ ಕೇಳಿಬರುತ್ತಿದೆ. ನೀರಿನ ಬವಣೆ ಹೋಗಲಾಡಿಸುವ ಸಲುವಾಗಿ ಒಡ್ಡುಗಳನ್ನು ನಿರ್ಮಿಸಿ ಓಡುವ ನೀರನ್ನು ನಿಲ್ಲಿಸಿ, ನಿಂತ ನೀರನ್ನು ಇಂಗಿಸಿ ಎಂದು ಇಂದಿನ ದಿನಗಳಲ್ಲಿ  ಸಲಹೆ ನೀಡುತ್ತಿದ್ದಾರೆ. ಇದರಿಂದ ಮಣ್ಣಿನ ಫಲವತ್ತತೆ ಹಾಗೂ ಅಂತರ್ಜಲ ಮಟ್ಟ ಏರಿಸಲು ಸಾಧ್ಯವಾಗುತ್ತದೆ ಎಂದೂ ಹೇಳುತ್ತಾರೆ. ಆದರೆ, ಎಷ್ಟು ಜನರು ಕಾರ್ಯರೂಪಕ್ಕೆ ತರುತ್ತಾರೆ ಎನ್ನುವುದು ತಿಳಿಯದು. ಒಡ್ಡುಗಳನ್ನು ನಿರ್ಮಿಸಿ ನೀರು ಇಂಗಿಸುವ ಕಾರ್ಯ ಬಹಳ ಹಿಂದಿನ ದಿನಗಳಲ್ಲೂ ನಡೆಯುತ್ತಿತ್ತು. ಇದಕ್ಕೆ ಉದಾಹರಣೆ  ಸುಳ್ಯ ತಾಲೂಕಿನ  ಪೆರುವಾಜೆ ಗ್ರಾಮದ ಕಾನಾವು ಎಂಬಲ್ಲಿಯ ಮಂಜನಾಕಜೆ ಕಟ್ಟೆ.

ಕಾನಾವು ಕೆರೆ:

ಪೆರುವಾಜೆ ಗ್ರಾಮದ ಕಾನಾವು ಎಂಬಲ್ಲಿ ಸುಮಾರು 40 ವರ್ಷಗಳ ಹಿಂದೆ ನರಸಿಂಹ ಭಟ್ ಎಂಬವರು ಗುಡ್ಡದ ಬುಡದಲ್ಲಿ ಮಣ್ಣಿನ ಒಡ್ಡು ನಿರ್ಮಿಸಿ ಬೃಹತ್ ಕೆರೆ ನಿರ್ಮಾಣ ಮಾಡಿದ್ದಾರೆ. ಈ ಕೆರೆಯು ಸುಮಾರು 3 ಎಕರೆ ವಿಸ್ತೀರ್ಣದಲ್ಲಿದ್ದು, 30 ಅಡಿ ಆಳ ಹೊಂದಿದೆ. ಈ ಕೆರೆಯಲ್ಲಿ ಸಮೃದ್ಧವಾಗಿ ನೀರು ತುಂಬಿರುವುದರಿಂದ ಸುಮಾರು 35 ಎಕರೆ ಕೃಷಿ ತೋಟಕ್ಕೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಒಡ್ಡು ನಿರ್ಮಾಣದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲೂ ಒರತೆ ಪ್ರಮಾಣ ಸಾಕಷ್ಟು ಹೆಚ್ಚಿದ್ದು ಅನೇಕರಿಗೆ ಪ್ರಯೋಜನವಾಗಿದೆ. ಮಳೆಗಾಲದಲ್ಲಿ ಒಡ್ಡುವಿನ ಒಂದು ಭಾಗವನ್ನು ತೆರೆದು ನೀರು ಹೊರಬಿಡಲಾಗುತ್ತಿದೆ.

ಪಂಪ್‍ಸೆಟ್‍ನ ಅಗತ್ಯವೇ ಇಲ್ಲ
ಈ ಕೆರೆಯಿಂದ ತಗ್ಗು ಪ್ರದೇಶದಲ್ಲಿ ಅಡಿಕೆ, ತೆಂಗು ತೋಟವಿರುವುದರಿಂದ ಪಂಪ್‍ಸೆಟ್ ಇಲ್ಲದೇನೇ ಒಮ್ಮೆಗೆ 15 ಸ್ಪ್ರಿಂಕ್ಲರ್ ಮೂಲಕ ನೀರು ಸಿಂಪಡಿಸಲು ಸಾಧ್ಯವಾಗುತ್ತಿದೆ. ನರಸಿಂಹ ಭಟ್ ಅವರ ಪುತ್ರರಾದ ಗೋಪಾಲಕೃಷ್ಣ ಭಟ್ ಹಾಗೂ ತಿರುಮಲೇಶ್ವರ ಭಟ್ ಇದೀಗ ಆ ನೀರಿನ ಫಲಾನುಭವಿಗಳು.

ನಿಯಮಿತವಾಗಿ ಅಂದರೆ, ಯಾವ ಪ್ರಮಾಣದಲ್ಲಿ ನೀರನ್ನು ಗಿಡಕ್ಕೆ ಸಿಂಪಡಣೆ ಮಾಡಬೇಕು ಎನ್ನುವ ಅರಿವು ಇರುವ ಇವರು ಅವಶ್ಯಕತೆಗೆ ತಕ್ಕಂತೆ ನೀರು ಬಳಕೆ ಮಾಡಿಕೊಂಡು, ಆ ಕೆರೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಕೆರೆಯ ಸುತ್ತುಮುತ್ತಲಿನ ಕಾಡಿನ ನಾಶ ಮಾಡದೇ ಇವರು ಅದನ್ನ ಸಂರಕ್ಷಿಸಿಕೊಂಡು ಬಂದಿರುವುದು ಮಾತ್ರವಲ್ಲದೇ ಗಿಡಗಳನ್ನು ನೆಟ್ಟು ಪೋಷಿಸಿ ಇತರರಿಗೆ ಮಾದರಿಯಾಗಿದ್ದಾರೆ.

ನೀರಿನ ಸಂರಕ್ಷಣೆ
ನೀರಿನ ಮಹತ್ವವನ್ನು ತಿಳಿದು ನೀರಿನ ಸಂರಕ್ಷಣೆ ಮಾಡುವುದು ಪ್ರಥಮ ಆದ್ಯತೆಯಾಗಬೇಕು. ಬರ ಬಂದ ಬಳಿಕ ದುಖಿಸುವ ಬದಲು ಈಗಿನಿಂದಲೇ ನೀರಿನ ಸಂರಕ್ಷಣೆ, ಸಂವರ್ಧನೆ ಕುರಿತು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಬೇಕು. ಕೃಷಿಕರ ಪಂಪ್‍ಸೆಟ್‍ಗೆ ಉಚಿತ ವಿದ್ಯುತ್ ಪೂರೈಕೆಯಾಗುತ್ತಿಗುತ್ತಿರುವುದರಿಂದ ಕೆಲ ಕಡೆ ದುರುಪಯೋಗವಾಗುತ್ತಿರುವುದಕ್ಕೆ ಕಡಿವಾಣ ಬೀಳಬೇಕು. ಜನಸಾಮಾನ್ಯರು ನೀರಿನ ವಿಚಾರದಲ್ಲಿ ಸರಕಾರ ಅಥವಾ ಅಕಾರಿಗಳನ್ನು ಮಾತ್ರ ಬೊಟ್ಟು ಮಾಡಿ ತೋರಿಸದೇ ತಾವು ಅಳವಡಿಸಿಕೊಳ್ಳಬಹುದಾದ ಕ್ರಮಗಳತ್ತನೂ ಚಿಂತನೆ ಮಾಡಬೇಕು.

ಇಂದಿನ ನೀರಿನ ಸಮಸ್ಯೆ ಬಗ್ಗೆ ಮಾತನಾಡುವ ಗೋಪಾಲಕೃಷ್ಣ ಭಟ್ ಕಾನಾವು,“ನಾವು ಗಿಡ ನೆಟ್ಟು ಕಾಡು ಬೆಳೆಸಿ ಪ್ರಕೃತಿ ರಕ್ಷಣೆ ಮಾಡಲು ಮುಂದಾಗಬೇಕು. ನೀರಿನ ಮಹತ್ವ ತಿಳಿದು ಮಳೆಗಾಲದ ನೀರನ್ನು ಒಡ್ಡು ನಿರ್ಮಿಸುವುದರ ಮೂಲಕ ಇಂಗಿಸುವುದರೊಂದಿಗೆ ನೀರಿನ ಮಿತ ಬಳಕೆ ಮಾಡಬೇಕು, ಆಗ ಮಾತ್ರಾ ಪರಿಹಾರ ಸಾಧ್ಯ “ ಎಂದು ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago