ಸುದ್ದಿಗಳು

ಬರವಣಿಗೆಯಲ್ಲಿ ನೈಜತೆ ಕಾಪಾಡಿಕೊಳ್ಳುವುದು ಅಗತ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಒಂದು ಲೇಖನವನ್ನು ಬರೆಯುವ ಮೊದಲು ಪೂರ್ವಗ್ರಹಪೀಡಿತ ಮನಸ್ಥಿತಿ ಇರಬಾರದು. ಲೇಖಕ ತನ್ನ ಮನಸ್ತಾಪಗಳನ್ನು ಬದಿಗಿರಿಸಿ ನೈಜತೆಯನ್ನು ಸ್ವತಂತ್ರವಾಗಿ ಬರೆಯಬೇಕು. ಆಗ ಲೇಖನ ಸತ್ಯತೆಯನ್ನು ತಿಳಿಸುವುದರೊಂದಿಗೆ ಲೇಖನದ ಮೌಲ್ಯ ವೃದ್ಧಿಯಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.

Advertisement
Advertisement

ಅವರು  ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಗುರುವಾರ ಆಯೋಜಿಸಿದ್ದ ‘ಬರವಣಿಗೆ ಕೌಶಲ್ಯ’ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಬರವಣಿಗೆ ಎಂದರೆ ವಿಷಯವನ್ನು ಅರಿತು ಆನಂತರ ಅದರ ಕುರಿತು ವಿಷಯವನ್ನು ಸಂಗ್ರಹಿಸಿ ಬರೆಯುವುದಲ್ಲ. ದಿನನಿತ್ಯದ ಜೀವನದ ಹಲವು ವಿಷಯಗಳು ಗುರುತಿಸಿ ಮಾಹಿತಿ ಕಲೆ ಹಾಕುವುದು ನಿಜವಾದ ಬರವಣಿಗೆ ಎಂದೆನಿಸುತ್ತದೆ. ಆಗ ಮಾತ್ರ ಯಾವ ರೀತಿ ಬರಹಗಳನ್ನು ಬೇಕಾದರು ಬರೆಯಲು ಧೈರ್ಯ ಹಾಗೂ ದೃಢವಾದ ಮಾಹಿತಿಗಳು ಲಭಿಸುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪುತ್ತೂರಿನ ಅಡಿಕೆ ಪತ್ರಿಕೆಯ ಸಹಸಂಪಾದಕ ನಾ. ಕಾರಂತ ಪೆರಾಜೆ ಮಾತನಾಡಿ, ಬರವಣಿಗೆ ಒಂದು ಧ್ಯಾನ, ಅದೊಂದು ನಾವೇ ಕೈಗೆತ್ತಿಕೊಳ್ಳುವ ತಪಸ್ಸು ಇದ್ದಂತೆ. ಇದು ಕಾಲಾತೀತವಾದ ಕಾರ್ಯ. ಕಲೆ ಮತ್ತು ಬರವಣಿಗೆ ಒಂದಕ್ಕೊಂದು ಬೆಸೆದುಕೊಂಡಿದೆ. ಕಲೆಯ ಸ್ಪರ್ಶ ಬರವಣಿಗೆಗೆ ನೀಡಿದಾಗ ಅದು ಸುಂದರವಾಗಿ ಮೂಡಿಬರುತ್ತದೆ. ಇಂಟರ್ನೆಟ್‍ನಲ್ಲಿ ಸಿಗುವ ಮಾಹಿತಿ ಜ್ಞಾನವಲ್ಲ. ಅದನ್ನು ಹೊರತುಪಡಿಸಿ ಜೀವನಕ್ಕೆ ಹತ್ತಿರವಾಗಿರುವುದನ್ನು ಬರೆಯಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಐ.ಕ್ಯು.ಎ.ಸಿ. ಘಟಕದ ಸಂಯೋಜಕ ಡಾ. ಶ್ರೀಧರ್ ಎಚ್.ಜಿ., ಕಣ್ಣೆದುರಿಗೆ ದಿನನಿತ್ಯವು ಕಾಣುವ ಅದೆಷ್ಟೋ ವಿಚಾರಗಳು, ವಿಸ್ಮಯಗಳು ಇರುತ್ತದೆ. ಅದನ್ನು ಗಮನಿಸಿದರೆ ಮಾತ್ರ ಬರಹಗಾರನ ಬೊಗಸೆಗೆ ಅವು ಸೇರುತ್ತವೆ. ಬರವಣಿಗೆಗೆ ಶಬ್ದಕೋಶಗಳು ಎಷ್ಟಿದ್ದರೂ ಸಾಕಾಗಲಾರದು. ಆದರೆ ತಂತ್ರಜ್ಞಾನ ಮತ್ತು ಆವಿಷ್ಕಾರಗಳ ಕೈಗೆ ಸಿಲುಕಿ ಹಲವಾರು ಸುಂದರ ಪದಗಳು ಕಳೆದುಹೋಗುತ್ತಿವೆ. ಅದರತ್ತ ಮುಖ ಮಾಡಿದರೆ ಬರಹಗಳ ಮೌಲ್ಯ ಹೆಚ್ಚುತ್ತದೆ ಎಂದು ನುಡಿದರು.

ವಿದ್ಯಾರ್ಥಿನಿ ಪವಿತ್ರ ಪ್ರಾರ್ಥಿಸಿದರು. ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ಸ್ವಾಗತಿಸಿದರು. ಸೀಮಾ ವಂದಿಸಿದರು. ಶಿವಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

4 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

21 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

22 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

1 day ago