Advertisement
ಸುದ್ದಿಗಳು

ಬಲಮುರಿಯ ಅಗಸ್ತ್ಯೇಶ್ವರ, ಕಾವೇರಿ ಕಣ್ವಮುನೀಶ್ವರ ದೇವಾಲಯದಲ್ಲಿ ತುಲಾ ಸಂಕ್ರಮಣದ ವಿಶೇಷ ಪೂಜೆ

Share

ಮಡಿಕೇರಿ : ಮೂರ್ನಾಡು ಸಮೀಪದ ಕಾವೇರಿ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ದ ಬಲಮುರಿ ಗ್ರಾಮದ ಅಗಸ್ತ್ಯೇಶ್ವರ ಹಾಗೂ ಕಾವೇರಿ ಕಣ್ವಮುನೀಶ್ವರ ದೇವಾಲಯದಲ್ಲಿ ತುಲಾ ಸಂಕ್ರಮಣದ ವಿಶೇಷ ಪೂಜಾ ಕಾರ್ಯಗಳು ಭಕ್ತಾಧಿಗಳ ಸಮ್ಮುಖದಲ್ಲಿ ಜರುಗಿತು.

ತಲಕಾವೇರಿಯಲ್ಲಿ ಕಾವೇರಿ ತೀರ್ಥೊದ್ಭವದ ದಿನದಂದೆ ಬಲಮುರಿಯಲ್ಲೂ ತುಲಾ ಸಂಕ್ರಮಣದ ಜಾತ್ರೆ ಈ ವರ್ಷ ನಡೆದಿದೆ. ಅಗಸ್ತ್ಯೇಶ್ವರ ದೇವಾಲಯದ ಅರ್ಚಕ ಚಂದ್ರಶೇಖರ್ ಐತಾಳ್ ಅವರ ನೇತೃತ್ವದಲ್ಲಿ ಬೆಳಗ್ಗೆ 5 ಗಂಟೆಯಿಂದ ಧಾರ್ಮಿಕ ಕೈಂಕರ್ಯಗಳು ಆರಂಭಗೊಂಡು, ದೇವರಿಗೆ ಕರ್ಪೂರದಾರತಿ, ರುದ್ರಾಭಿಷೇಕ, ಕುಂಕುಮಾರ್ಚನೆ, ಮಹಾಪೂಜೆ ಜರುಗಿತು. ಬೆಳಿಗ್ಗಿನಿಂದಲೆ ದೇವಾಲಯಕ್ಕೆ ಆಗಮಿಸಿದ ಭಕ್ತಾಧಿಗಳು ತೀರ್ಥ ಪ್ರಸಾದ ಸ್ವೀಕರಿಸಿ, ದೇವರ ಕೃಪೆಗೆ ಪಾತ್ರರಾದರು.

ಕಾವೇರಿ ನದಿಯ ಎಡಭಾಗದಲ್ಲಿರುವ ಕಾವೇರಿ ಕಣ್ವ ಮುನೀಶ್ವರ ದೇವಾಲಯದಲ್ಲಿಯು ಪೂಜಾ ಕಾರ್ಯಕ್ರಮಗಳು ಬೆಳಿಗ್ಗಿನಿಂದಲೆ ಪ್ರಾರಂಭಗೊಂಡು ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ಮೊದಲು ಕಾವೇರಿ ಕಣ್ವ ಮುನೀಶ್ವರ ದೇವಾಲಯಕ್ಕೆ ಹೋಗಿ ಹಣ್ಣುಕಾಯಿ ಪೂಜೆ ಸಲ್ಲಿಸಿ ಅಲ್ಲಿಂದ ಅಗಸ್ತ್ಯೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬಲಮುರಿಯ ಗ್ರಾಮದ ಭಕ್ತಾದಿಗಳಲ್ಲದೆ, ಮೂರ್ನಾಡು, ಪಾರಾಣೆ, ಬೇತ್ರಿ, ಹೊದ್ದೂರು, ನಾಪೋಕ್ಲು, ಕೊಂಡಂಗೇರಿ ಸುತ್ತಮುತ್ತಲ ಗ್ರಾಮಗಳಿಂದ ಭಕ್ತರು ಆಗಮಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ತುಲಾ ಸಂಕ್ರಮಣದ ಸಂದರ್ಭದಲ್ಲಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ತೆರಳಲು ಸಾಧ್ಯವಾಗದ ಭಕ್ತರು ಬಲಮುರಿಗೆ ಬಂದು ಕಾವೇರಿ ತೀರ್ಥಸ್ನಾನ ಮಾಡಿ ಪುನೀತರಾಗಿ ತೆರಳಿದರು. ಕಾವೇರಿ ನದಿಯ ತೀರದಲ್ಲಿ ಕೇಶ ಮುಂಡನ, ಪೂರ್ವಿಕರಿಗೆ ಪಿಂಡಾರ್ಪಣೆ ಕಾರ್ಯಗಳು ನಡೆದವು.

ಪ್ರತಿವರ್ಷಕ್ಕಿಂತ ಈ ಬಾರಿ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರ ಸಂಖ್ಯೆ ಅಧಿಕವಿತ್ತು. ಭಕ್ತಾಧಿಗಳಿಗೆ ಬಲಮುರಿ ಗ್ರಾಮದ ಪೇರಿಯಂಡ ಪೆಮ್ಮಯ್ಯ ಅವರ ಸಹಕಾರದಿಂದ ಅನ್ನಸಂತರ್ಪಣೆ ನಡೆಯಿತು.

ಅಗಸ್ತ್ಯೇಶ್ವರ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಕೊಂಗೀರಂಡ ಸಾಧು ತಮ್ಮಯ್ಯ, ಕಾರ್ಯದರ್ಶಿ ಪೊನ್ನಚ್ಚನ ಜಯ ಮತ್ತು ಸದಸ್ಯರು ಹಾಗೂ ಕಾವೇರಿ ಕಣ್ವ ಮುನೀಶ್ವರ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಎಂ.ಅಪ್ಪಚ್ಚು, ಕಾರ್ಯದರ್ಶಿ ಚೇಯ್ಯಂಡ ಗಣಪತಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

19 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

21 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

21 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

24 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago