ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.
ಬುಧವಾರ ಬೆಳಗ್ಗೆ ಬಲ್ಯದಿಂದ ಹೊರಟು ಕಡಬದಲ್ಲಿ ಅದ್ದೂರಿ ಸ್ವಾಗತ ನಡೆದು ಬಳಿಕ ವಾಹನ ರಾಲಿ ಮೂಲಕ ಸುಬ್ರಹ್ಮಣ್ಯದ ಕಡೆಗೆ ತೆರಳಲಿದೆ. ಕುಲ್ಕುಂದದ ಬಳಿಯಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ. ಟ್ಯಾಬ್ಲೋ, ಚೆಂಡೆ ಇತ್ಯಾದಿಗಳ ಮೂಲಕ ಅದ್ದೂರಿ ಮೆರವಣಿಗೆ ನಡೆಯಲಿದೆ. ಸುಬ್ರಹ್ಮಣ್ಯದಲ್ಲಿ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆದಿದೆ.
ರಥವನ್ನು ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಕುಮಾರ್ ಕಡಬ ಅವರು ಕಾಣಿಕೆ ರೂಪದಲ್ಲಿ ನೀಡುತ್ತಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…