ಬಳ್ಪ: ಬಳ್ಪ ಗ್ರಾಮದ ಆಲ್ಕಬೆ ಬೈಲಿನಲ್ಲಿ ಚಿರತೆಯೊಂದು ಕೃಷಿಕನಿಗೆ ದಾಳಿ ಮಾಡಿದ ಬಳಿಕ “ಆಪರೇಶನ್ ಚೀತಾ” ನಡೆಯಿತು. ಗುರುವಾರ ಮಧ್ಯಾಹ್ನದ ಹೊತ್ತಿಗೆ ಆಲ್ಕಬೆ ಬೈಲಿನ ಕಾಯಾರ ಬಾಲಕೃಷ್ಣ ಎಂಬವರಿಗೆ ತೋಟದಲ್ಲಿ ಹುಲ್ಲಿಗೆ ಹೋದಾಗ ದಾಳಿ ನಡೆಸಿತ್ತು. ತಕ್ಷಣವೇ ಗಾಯಾಳು ಕೃಷಿಕರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ನಡೆಸಿದರು.
ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯೊಬ್ಬರ ಮೇಲೂ ಚಿರತೆ ದಾಳಿ ನಡೆಸಿದೆ. ಚಿರತೆ ಹಿಡಿಯುವ ಕಾರ್ಯಾಚರಣೆ ರಾತ್ರಿಯವರೆಗೆ ನಡೆದು “ಆಪರೇಶನ್ ಚೀತಾ” ಸದ್ಯಕ್ಕೆ ನಿಲ್ಲಿಸಿ ಬೋನು ಇರಿಸಿ ಇಲಾಖಾ ಅಧಿಕಾರಿಗಳು ಹಿಂತಿರುಗಿದ್ದು ನಾಳೆ ಮತ್ತೆ ಕಾರ್ಯಾಚರಣೆ ನಡೆಯಲಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…